ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಅಂತರಗಂಗೆಯ ಒಡಲಲ್ಲಿ…

aadima-mast

 ‘ಆದಿಮ’ ತನ್ನದೇ ಆದ ಬ್ಲಾಗ್ ಹೊಂದಿದೆ. ಅಂತರಗಂಗೆಯ ಒಡಲಲ್ಲಿ ನಿರಂತರವಾಗಿ ಚಟುವಟಿಕೆ ನಡೆಸುತ್ತಿರುವ ಆದಿಮ ಅನೇಕ ಪುಸ್ತಕಗಳನ್ನೂ ಹೊರ ತಂದಿದೆ. ಅದರ ವಿವರಗಳು ಇಲ್ಲಿವೆ.

ಆದಿಮ ಪ್ರಕಾಶನ

ಅರ್ಥಪೂರ್ಣ ಸಾಂಸ್ಕೃತಿಕ ಸಂವಾದದ ಆಶಯಕ್ಕೆ ಪೂರಕವಾದ ಮತ್ತೊಂದು ಚಟುವಟಿಕೆ- ಪುಸ್ತಕಗಳ ಪ್ರಕಟಣೆ. ಈ ನಿಟ್ಟಿನಲ್ಲಿ ಆದಿಮ ಪ್ರಕಾಶನ ಈವರೆಗೆ ಮಹತ್ವದ ಐದು ಕೃತಿಗಳನ್ನು ಹೊರತಂದಿದೆ:
1. ಆವರಣ ಅನಾವರಣ– ಎನ್.ಎಸ್.ಶಂಕರ್.
    ಎಸ್.ಎಲ್.ಭೈರಪ್ಪನವರ ಕೋಮುವಾದಿ ಪ್ರಣಾಳಿಕೆಯ ಕಾದಂಬರಿ ಆವರಣಕ್ಕೆ
    ಸಮರ್ಥ ಪ್ರತಿಕ್ರಿಯೆ.  ನಾಡಿನ ಸಾಂಸ್ಕೃತಿಕ ವಲಯದಲ್ಲಿ ಹೊಸ ವಾಗ್ವಾದವನ್ನು
    ಹುಟ್ಟುಹಾಕಿದ ಹೊತ್ತಗೆ.
2. ಕನಕ ಮುಸುಕು– ಡಾ.ಕೆ.ಎನ್.ಗಣೇಶಯ್ಯ
     ಕನ್ನಡಕ್ಕೇ ವಿಶಿಷ್ಟವಾದ  ಇತಿಹಾಸ ಸಂಶೋಧನೆ ಆಧಾರಿತ ಕೌತುಕಮಯ ಕಾದಂಬರಿ.
3. ಸಾಮಾನ್ಯನ ಸಂಕ್ರಮಣ– ಎನ್.ಎಸ್.ಹಾಲಪ್ಪ
     ಸಾಮಾನ್ಯನೊಬ್ಬನ ಸ್ವಾತಂತ್ರ್ಯ ಹೋರಾಟ ಅನುಭವದ ಅಪರೂಪದ ದಾಖಲೆ.
4. ಕಾರಿಡಾರ್ ಕಾಲಕೋಶ– ಜೆಸುನಾ
     ಹಿರಿಯ ಪತ್ರಕರ್ತ ಜೆಸುನಾ ನೀಡಿದ- ನಮ್ಮ ರಾಜಕೀಯ ನಾಯಕರ ದೈನಂದಿನದ  ಆಪ್ತ ಚಿತ್ರಣ.
5. ಬ್ರಾಹ್ಮಣ ಧರ್ಮದ ದಿಗ್ವಿಜಯ– ಡಾ.ಬಿ.ಆರ್.ಅಂಬೇಡ್ಕರ್
    ಕನ್ನಡಕ್ಕೆ:ಎನ್.ಎಸ್.ಶಂಕರ್. ಹಿಂದೂ ಚರಿತ್ರೆಯಲ್ಲಿ ಆಸಕ್ತಿ ಉಳ್ಳವರೆಲ್ಲರೂ
    ಕಡ್ಡಾಯವಾಗಿ ಓದಬೇಕಾದ- ಅಂಬೇಡ್ಕರರ ಸ್ಫೋಟಕ ಸಂಶೋಧನಾ ಕೃತಿಯ
    ಕನ್ನಡಾನುವಾದ.
 
******  ನಮ್ಮೊಂದಿಗೆ ನೀವೂ ಹೆಜ್ಜೆಗೂಡಿಸುವಂತಿದ್ದರೆ, ನೀವು
* ದಿನಕ್ಕೊಂದು ರೂಪಾಯಿ ಕೂಡಿಸಿ ನೀಡುವ ಮೂಲಕ ಆದಿಮದ ಸದಸ್ಯರಾಗಬಹುದು
* ಆದಿಮ ಕಾರ್ಯ ಚಟುವಟಿಕೆಗಳಿಗೆ ನಿಮ್ಮಿಂದಾದಷ್ಟು ಹಣದ ನೆರವು ನೀಡುವ ಮೂಲಕ ನಮ್ಮ ಬಳಗದಲ್ಲಿ ಒಬ್ಬರಾಗಬಹುದು
* ಆದಿಮ ರೆಪರ್ಟರಿಯ ಪ್ರಯೋಗಗಳನ್ನು ಆಹ್ವಾನಿಸಿ ನಿಮ್ಮ ಶಾಲೆ/ಸಮಾರಂಭಗಳಲ್ಲಿ ಅರ್ಥಪೂರ್ಣ
   ಮನರಂಜನೆ ಒದಗಿಸುವ ಮೂಲಕವೂ ಆದಿಮಕ್ಕೆ ನೆರವಾಗಬಹುದು
*ಆದಿಮ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ ನೀಡಬಹುದು.

ನಿಮ್ಮ ಸಲಹೆ ಸೂಚನೆಗಳಿಗೂ ಸ್ವಾಗತ.
  ನಮ್ಮ ಬ್ಯಾಂಕ್ ಖಾತೆ: ಕೆನರಾ ಬ್ಯಾಂಕ್, ಕೋಲಾರ
ಖಾತೆಯ ಹೆಸರು: ಆದಿಮ ಸಾಂಸ್ಕೃತಿಕ ಸಂಘಟನೆ
ಖಾತೆ ಸಂಖ್ಯೆ: 0539101025242

ನಮ್ಮ ವಿಳಾಸ:
ಆದಿಮ
ಜಿಂಕೆ ರಾಮಯ್ಯ ಜೀವತಾಣ
ಶಿವಗಂಗೆ, ಮಡೇರಹಳ್ಳಿ ಅಂಚೆ
ಕೋಲಾರ-563 101
ಫೋನ್: 94484 91906, 9448558378 
ಇ-ಮೇಲ್: adima.culture@gmail.com

‍ಲೇಖಕರು avadhi

20 November, 2008

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading