‘ಅಮ್ಮ ಪ್ರಶಸ್ತಿ’ಗೆ ಬೆಳ್ಳಿ ಹಬ್ಬ
25 ನೇ ವರ್ಷದ ‘ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ
ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ‘ಅಮ್ಮ ಪ್ರಶಸ್ತಿ’ ಪ್ರಖ್ಯಾತಿಯನ್ನು ಪಡೆದಿದ್ದು, ಇದೀಗ 25 ನೇ ವರ್ಷದ ಸಂಭ್ರಮದಲ್ಲಿದೆ. ಪತ್ರಕರ್ತ ಹಾಗೂ ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ತಾಯಿಯ ಸ್ಮರಣಾರ್ಥವಾಗಿ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ 25 ನೇ ವರ್ಷದ ‘ಅಮ್ಮ ಪ್ರಶಸ್ತಿ’ಗಾಗಿ 2024 ಮತ್ತು 2025 ನೇ ಸಾಲಿನಲ್ಲಿ ಪ್ರಕಟವಾದ ಕೃತಿಗಳನ್ನು ಆಹ್ವಾನಿಸಲಾಗಿದೆ.
ಕಳೆದ 24 ವರ್ಷಗಳಿಂದ ನಿರಂತರ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ನೀಡಲಾಗುತ್ತಿರುವ ಈಗ ಅಮ್ಮ ಪ್ರಶಸ್ತಿಗೆ 25 ರ ಸಂಭ್ರಮ. ಈ ಹಿನ್ನೆಲೆಯಲ್ಲಿ ರಾಜ್ಯ ಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ಗಾಗಿ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳ ಎರಡು ಪ್ರತಿಗಳನ್ನು ಕಳುಹಿಸಬಹುದು. ಆಯ್ಕೆಯಾದ 5 ಕೃತಿಗಳಿಗೆ ತಲಾ 5 ಸಾವಿರ ನಗದು ಪುರಸ್ಕಾರ ಮತ್ತು ಸನ್ಮಾನ, ಗೌರವದ ಕಾಣಿಕೆ ನೀಡಿ ಸತ್ಕರಿಸಲಾಗುವುದು. ಕೃತಿಗಳನ್ನು ಸ್ವೀಕರಿಸಲು ಅಕ್ಟೋಬರ್ 30 ಕೊನೆಯ ದಿನಾಂಕವಾಗಿರುತ್ತದೆ ಎಂದು ಪ್ರತಿಷ್ಠಾನದ ಸಂಚಾಲಕಿ ರತ್ನಕಲಾ ಮಹಿಪಾಲರೆಡ್ಡಿ ತಿಳಿಸಿದ್ದಾರೆ.
ಕೃತಿಗಳನ್ನು ಕಳುಹಿಸಬೇಕಾದ ವಿಳಾಸ : ಶ್ರೀಮತಿ ರತ್ನಕಲಾ ಮಹಿಪಾಲರೆಡ್ಡಿ ಮುನ್ನೂರ್, ಸಂಚಾಲಕಿ, ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ “ಅಮ್ಮ ನಿಲಯ”, ರಾಮಚಂದ್ರ ಲೇಔಟ್, ಪಿಡಬ್ಲ್ಯೂಡಿ ಕಚೇರಿ ಹತ್ತಿರ, ಸೇಡಂ-585 222 ಕಲಬುರಗಿ ಜಿಲ್ಲೆ.
ಹೆಚ್ಚಿನ ವಿವರಗಳಿಗಾಗಿ 9731666052 ಸಂಪರ್ಕಿಸಬಹುದು.






0 Comments