ಟೌನ್ ಹಾಲ್ ಎದುರು
ಬಸ್ಸಲ್ಲಿ ಕೂತವಳ
ಕಣ್ಣಲ್ಲಿ ಕಿತ್ತೂರು ಚೆನ್ನಮ್ಮನ ಖಡ್ಗ
ಬೆನ್ನಲ್ಲಿ
ಸುಟ್ಟ ಸಿಗರೇಟಿನ ಉರಿ
–
ಸಾವಿರ ವಾಹನಗಳ
ಕೈ ಸನ್ನೆಯಲ್ಲೇ
ನಿಲ್ಲಿಸುವ ಟ್ರಾಫಿಕ್ ಪೇದೆ;
ವರ್ಷ ನಾಲ್ಕಾಯ್ತು
ಪ್ರಮೋಷನ್ ಸಿಗದೆ
–
“ಇಲ್ಲಿ ಲಿಂಗ ಪತ್ತೆ ಮಾಡಲಾಗುವುದಿಲ್ಲ”
ಹೇಳುತ್ತಿದೆ ಆಸ್ಪತ್ರೆಯ ಫಲಕ
ಹಿತ್ತಲ ಕಸದ ರಾಶಿಯ
ಒಳಗೆ
ಬೆಳಕೇ ಕಾಣದ ಮೊಳಕೆ
–
ಎಲ್ಲ ಸಮಸ್ಯೆಗೆ
ಪರಿಹಾರ ಹೇಳುವ ಜ್ಯೋತಿಷಿಯ
ಮಗಳು
ಅಚಾನಕ್ಕು ಓಡಿ ಹೋಗಿದ್ದಾಳೆ
ಇಂದು ಜ್ಯೋತಿಷ್ಯಾಲಯ ಬಂದು.








ಚೆನ್ನಾಗಿದೆ ಕವನ…
belake kaanada molake …. tumbaa chennaagide.
annayavagi great agi betala guru
ಪೇದೆಗೆ ಪ್ರಮೋಶನ್ ಸಿಗಲಿ…
ನಿನ್ನ ಕವಿತೆ ಅವಧಿಯಲ್ಲಿ ಸದಾ ಮೊಳಕೆಯೊಡೆಯಲಿ….