ಇಂದಿರಾ ಹೆಗ್ಗಡೆ, ಎಂ ಎಸ್ ಆಶಾದೇವಿಗೆ ಎಚ್ ಎಸ್ ಪಾರ್ವತಿ ಪ್ರಶಸ್ತಿ

ಕರ್ನಾಟಕ ಲೇಖಕಿಯರ ಸಂಘ ಕೊಡಮಾಡುವ ಎಚ್.ಎಸ್.ಪಾರ್ವತಿ ದತ್ತಿ ಪ್ರಶಸ್ತಿಯು ಪ್ರಕಟವಾಗಿದ್ದು 2022ನೇ ಸಾಲಿಗೆ ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಮತ್ತು 2023ನೇ ಸಾಲಿಗೆ ವಿಮರ್ಶಕಿ ಡಾ. ಎಂ.ಎಸ್. ಆಶಾದೇವಿ ಅವರು ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷರಾದ ಡಾ.ಎಚ್.ಎಲ್.ಪುಷ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಯ ಮೊತ್ತ 10 ಸಾವಿರ ನಗದು ಮತ್ತು ಸ್ಮರಣ ಫಲಕಗಳನ್ನು ಒಳಗೊಂಡಿರುತ್ತದೆ.

ಹಿರಿಯ ಲೇಖಕಿ ಎಚ್.ಎಸ್. ಪಾರ್ವತಿ ಅವರು ಕರ್ನಾಟಕ ಲೇಖಕಿಯರ ಸಂಘದ ಸ್ಥಾಪಕ ಕಾರ್ಯದರ್ಶಿ, ನಂತರ ಅಧ್ಯಕ್ಷೆಯೂ ಆಗಿದ್ದು, 68ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದು, ಸಂಶೋಧನೆ ಮತ್ತು ವಿಚಾರ ಸಾಹಿತ್ಯಕ್ಕಾಗಿ ಕರ್ನಾಟಕ ಲೇಖಕಿಯರ ಸಂಘದಲ್ಲಿ ತಮ್ಮ ಹೆಸರಿನಲ್ಲಿ ದತ್ತಿ ಪ್ರಶಸ್ತಿಯನ್ನು ಇರಿಸಿದ್ದರು.

ಹಿರಿಯ ಲೇಖಕಿ ಡಾ. ವಸುಂಧರಾ ಭೂಪತಿ, ಉಪನ್ಯಾಸಕಿ ವತ್ಸಲಾ ಮೋಹನ್ ಅವರು ಆಯ್ಕೆ ಸಮಿತಿಯಲ್ಲಿದ್ದರು. ಈ ಸಂದರ್ಭದಲ್ಲಿ ಎಚ್.ಎಸ್. ಪಾರ್ವತಿ ಅವರ ಮಗಳು ಉಪನ್ಯಾಸಕಿ ಮತ್ತು ರಂಗಕಲಾವಿದೆ ಡಾ. ಎಂ.ಎಸ್. ವಿದ್ಯಾ ಹಾಗೂ ಸಂಘದ ಕಾರ್ಯದರ್ಶಿ ಭಾರತಿ ಹೆಗಡೆ ಉಪಸ್ಥಿತರಿದ್ದರು.

‍ಲೇಖಕರು avadhi

November 26, 2023

ನಿಮಗೆ ಇವೂ ಇಷ್ಟವಾಗಬಹುದು…

‘ವೀರಲೋಕ’ದಿಂದ ಉತ್ತರಪರ್ವ

‘ವೀರಲೋಕ’ದಿಂದ ಉತ್ತರಪರ್ವ

ಸಾಮಾನ್ಯವಾಗಿ ಸಾಹಿತ್ಯಲೋಕದಲ್ಲಿ ಕೇಳಿಬರುವ ಮಾತು… ಎಲ್ಲಾ ಪ್ರಶಸ್ತಿಗಳು, ವೇದಿಕೆಗಳು, ಅಧಿಕಾರ, ಅವಕಾಶಗಳು ಒಂದು ಭಾಗದ ಜನರಿಗೇ ದಕ್ಕುತ್ತವೆ....

ಬೆಂಬಿಡದ ದಾಹ

ಬೆಂಬಿಡದ ದಾಹ

** ಎದ್ದೆ. ಕಣ್ಬಿಟ್ಟಾಗ ರೂಮು ಅರೆ ಕತ್ತಲಾಗಿತ್ತು, ಫ್ಯಾನ್ ಎರಡರ ಸ್ಪೀಡಿನಲ್ಲಿ ತಿರುಗುತ್ತಿತ್ತು, ಮೊಬೈಲ್ ಚಾರ್ಜ್ ಆಗುತ್ತಿತ್ತು,...

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ.  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ...

0 Comments

Submit a Comment

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This