ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

‘ಈ ಹೊತ್ತಿಗೆ’ ಪ್ರಶಸ್ತಿಗೆ ಆಹ್ವಾನ

2026ರ ಸಾಲಿನ ಈ ಹೊತ್ತಿಗೆ ಪ್ರಶಸ್ತಿಗಳಿಗಾಗಿ ಹಸ್ತಪ್ರತಿ ಆಹ್ವಾನ

‘ಈ ಹೊತ್ತಿಗೆ’ಯು ಕನ್ನಡದ ಅಪ್ರಕಟಿತ ಕಥಾ ಸಂಕಲನಗಳನ್ನು ಮತ್ತು ಅಪ್ರಕಟಿತ ಕವನ ಸಂಕಲನಗಳನ್ನು ‘ಈ ಹೊತ್ತಿಗೆ ಪ್ರಶಸ್ತಿ’ಗಾಗಿ ಆಹ್ವಾನಿಸುತ್ತಿದೆ.
ವಿಜೇತ ಕಥಾಸಂಕಲನ ಮತ್ತು ಕವನ ಸಂಕಲನಕ್ಕೆ ತಲಾ 10,000/- (ಹತ್ತು ಸಾವಿರ) ರೂಪಾಯಿ ನಗದು ಬಹುಮಾನ ಮತ್ತು ಪ್ರಶಸ್ತಿ ಫಲಕ ನೀಡಲಾಗುತ್ತದೆ.

ನಿಯಮಗಳು

  1. ಅಪ್ರಕಟಿತ ಸಂಕಲನದಲ್ಲಿರುವ ಕಥೆಗಳು/ಕವನಗಳು ಸ್ವತಂತ್ರವಾಗಿರಬೇಕು. ಸಂಕಲನದಲ್ಲಿ ಅನುವಾದಿತ ಕಥೆ/ಕವನಗಳು ಕಡ್ಡಾಯವಾಗಿ ಇರಕೂಡದು.
  2. ಕಥಾಸಂಕಲನವು 8ರಿಂದ 10 ಕಥೆಗಳನ್ನು ಒಳಗೊಂಡಿರಬೇಕು. ಚುಟುಕು ಕಥೆಗಳಿಗೆ ಅವಕಾಶವಿಲ್ಲ.
  3. ಕವನ ಸಂಕಲನವಾದರೆ 35-40 ಕವನಗಳನ್ನು ಒಳಗೊಂಡಿರಬೇಕು. ಚುಟುಕುಗಳನ್ನು ಕಳಿಸುವಂತಿಲ್ಲ.
  4. ಸಂಕಲನದಲ್ಲಿ ಕಡ್ಡಾಯವಾಗಿ ಸಂಕಲನದ ಶೀರ್ಷಿಕೆ ಮತ್ತು ಪರಿವಿಡಿ ಇರಬೇಕು. ಸಂಕಲನದ ಯಾವುದೇ ಪುಟಗಳಲ್ಲಿ ಲೇಖಕರ ಹೆಸರು ಇರಕೂಡದು.
  5. ಡಿಟಿಪಿ ಮಾಡಿಸಿ, ಬೈಂಡ್ ಮಾಡಿಸಿದ ಅಪ್ರಕಟಿತ ಸಂಕಲನದ ಮೂರು ಪ್ರತಿಗಳನ್ನು ಈ ಹೊತ್ತಿಗೆಯ ಅಂಚೆ ವಿಳಾಸಕ್ಕೆ ಕಳುಹಿಸಿಕೊಡಬೇಕು.
  6. ಲೇಖಕರು ಪ್ರತ್ಯೇಕ ಹಾಳೆಯಲ್ಲಿ ತಮ್ಮ ಹೆಸರು, ಸಂಕಲನದ ಹೆಸರು, ಸಂಪೂರ್ಣ ವಿಳಾಸ, ಮೊಬೈಲ್ ಸಂಖ್ಯೆಯನ್ನು ಬರೆದಿರಬೇಕು.
  7. ಪ್ರಶಸ್ತಿ ಘೋಷಣೆಯಾದ 30 ದಿನಗಳಲ್ಲಿ ಪ್ರಶಸ್ತಿ ಪಡೆದ ಸಂಕಲನವು ಮುದ್ರಣಗೊಳ್ಳಬೇಕು. ಕೃತಿ ಮುದ್ರಣಗೊಂಡರೆ ಮಾತ್ರ ಘೋಷಿತ ಬಹುಮಾನದ ಮೊತ್ತ ಹಾಗು ಪ್ರಶಸ್ತಿ ಫಲಕವು ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ಸಲ್ಲುತ್ತದೆ.
  8. ಪ್ರಶಸ್ತಿ ಪಡೆದ ಕೃತಿಯನ್ನು ಮುದ್ರಿಸುವಾಗ ಮುಖಪುಟ ಹಾಗು ಪುಸ್ತಕದ ಒಳ ಪುಟದಲ್ಲಿ ‘ಈ ಹೊತ್ತಿಗೆ (ಕಥಾ/ಕಾವ್ಯ) ಪ್ರಶಸ್ತಿ ವಿಜೇತ ಕೃತಿ’ ಎಂದು ಮುದ್ರಿಸಿರಬೇಕು.
  9. ಹಸ್ತಪ್ರತಿಗಳನ್ನು ಮರಳಿಸಲಾಗುವುದಿಲ್ಲ.

ಅಪ್ರಕಟಿತ ಕಥಾಸಂಕಲನ, ಕವನ ಸಂಕಲನ ನಮಗೆ ತಲುಪಲು ಕೊನೆಯ ದಿನಾಂಕ: 20 ನವೆಂಬರ್ 2025.
ಈ ಹೊತ್ತಿಗೆಯ ತೀರ್ಮಾನವೇ ಅಂತಿಮ.

2026ರ ಮಾರ್ಚಲ್ಲಿ ನಡೆಯುವ ಈ ಹೊತ್ತಿಗೆಯ ಹೊನಲು ಸಮಾರಂಭದಲ್ಲಿ ವಿಜೇತರಿಗೆ ಪ್ರಶಸ್ತಿಯನ್ನು ನೀಡಲಾಗುವುದು.

ಹಸ್ತಪ್ರತಿ ಕಳುಹಿಸಲು ವಿಳಾಸ :
ಈ ಹೊತ್ತಿಗೆ,
#65, ಮುಗುಳ್ನಗೆ, 3ನೇ ಅಡ್ಡರಸ್ತೆ,
ಪಿ.ಎನ್.ಬಿ. ನಗರ, ಕೋಣನಕುಂಟೆ,
ಬೆಂಗಳೂರು – 560062
ಸಂಪರ್ಕ ಸಂಖ್ಯೆ: 9611782621

‍ಲೇಖಕರು Admin

16 October, 2025

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading