ಡಾ. ಶಿವರಾಮ ಕಾರಂತರ ಸ್ಮೃತಿಯಲ್ಲಿ ಅವರ ಜನ್ಮಸ್ಥಳವಾದ ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಪ್ರಸಕ್ತ ಸಾಲಿನ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ್ ಕಾಸರವಳ್ಳಿ ಆಯ್ಕೆಯಾಗಿದ್ದಾರೆ ಎಂದು ಗ್ರಾ. ಪಂ. ಅಧ್ಯಕ್ಷ ರಘು ತಿಂಗಳಾಯ ತಿಳಿಸಿದ್ದಾರೆ.
ಸ್ಥಳೀಯಾಡಳಿತ ಸಂಸ್ಥೆಯಾದ ಗ್ರಾಮ ಪಂಚಾಯತ್ ತನ್ನೂರಿನಲ್ಲಿ ಜನಿಸಿದ ಸಾಹಿತಿಯೋರ್ವರ ಹೆಸರಿನಲ್ಲಿ ಕಳೆದ 5 ವರ್ಷಗಳಿಂದ ಪ್ರಶಸ್ತಿ ನೀಡುತ್ತಾ ಬಂದಿದ್ದು, ಇದು ದೇಶದಲ್ಲೇ ಅಪೂರ್ವ ಎಂದೆನಿಸಿದೆ.
ಈಗಾಗಲೇ ಈ ಪ್ರತಿಷ್ಠಿತ ಪ್ರಶಸ್ತಿ, ಡಾ. ಎಂ. ವೀರಪ್ಪ ಮೊಯ್ಲಿ, ಲೋಕಾಯುಕ್ತ ಮಾಜಿ ನ್ಯಾ. ವೆಂಕಟಾಚಲಯ್ಯ, ಶಿಕ್ಷಣ ತಜ್ಞ ಪ್ರೊ. ಕೆ. ಆರ್. ಹಂದೆ, ಪತ್ರಕರ್ತ ರವಿ ಬೆಳಗರೆ ಮತ್ತು ಯಕ್ಷಗಾನ ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರಿಗೆ ನೀಡಲಾಗಿದೆ.
ಕಾರಂತರ ಜನ್ಮದಿನವಾದ ಅ. 10ರ ಅಪರಾಹ್ನ 2ಕ್ಕೆ ಕೋಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು
ದೆಹಲಿಯಲ್ಲಿ ರಹಮತ್
ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]





Abhinandanegalu. Thumba santhosha.