ಎರಡು ಪ್ರಶ್ನೆ ಮತ್ತೆ ಇತರೆ ಕಥೆಗಳು….
– ಮೋಹನ್ ವಿ ಕೊಳ್ಳೇಗಾಲ
ಭಾವಗೊ೦ಚಲು ಎರಡು ಪ್ರಶ್ನೆ…. ಆತ ಆಶ್ರಮಕ್ಕೆ ಬಂದು ಸ್ವಾಮೀಜಿಗೆ ಗದರಿಸಿದ: “ನಾನ್ಯಾರು ಗೊತ್ತೇ?” ಸ್ವಾಮೀಜಿ ಶಾಂತಚಿತ್ತರಾಗಿ ಹೇಳಿದರು: ಗೊತ್ತಿಲ್ಲ, ಅದಿರಲಿ ನಿನಗೇನಾದರು ಗೊತ್ತೆ “ನಾನಾರೆಂದು?” ಹೆಸರು… ಅವರಿಬ್ಬರೂ ಓಡಿಹೋಗಿ ಮದುವೆಯಾದರು. ಬೇರೆ ಬೇರೆ ಜಾತಿಯಾದುದರಿಂದ ಹುಡುಗಿಯನ್ನು ಹೆತ್ತವರೇ ಕೊಂದುಬಿಟ್ಟರು. ಮಾಧ್ಯಮದವರು ಅದಕ್ಕೆ ನೀಡಿದ ಹೆಸರು “ಮರ್ಯಾದಾ ಹತ್ಯಾ!” ಸಹಪಂಕ್ತಿ… ಇಬ್ಬರ ನಡುವೆ ವಾದ ವಿವಾದ ನಡೆಯುತ್ತಿತ್ತು. ಒಬ್ಬ ಸಹಪಂಕ್ತಿ ಭೋಜನ ಸರಿ ಎಂದ ಮತ್ತೊಬ್ಬ ತಪ್ಪು ಎಂದ. ಇಬ್ಬರು ಕುಳಿತಿದ್ದದ್ದು ಮಾತ್ರ “ಸಹಪಂಕ್ತಿ ಕೇಶ ಮುಂಡನಕ್ಕೆ!” ಇವರಿಗಿಂತ ಮುಂಚೆ ಹತ್ತಾರು ಜನಕ್ಕೆ ಒಂದೇ ಕತ್ತರಿ ಬಾಚಣಿಗೆ ಉಪಯೋಗಿಸಿದ್ದ ಕ್ಷೌರಿಕ ಮಾತ್ರ ನಗುತ್ತಿದ್ದ. ಅಷ್ಟರಲ್ಲಿ ಮುಂದಿನ ಹೋಟೇಲಿನಲ್ಲಿ ಎಲ್ಲರಿಗೂ ಸೇರಿ ನಾಲ್ಕು ಲೋಟದಲ್ಲಿ ಟೀ ತರಿಸಲಾಯಿತು. ಭಾರತರತ್ನ… ತನ್ನ ದೇಶದ ಹೆಮ್ಮೆಯ ಕ್ರಿಕ್ಕೆಟ್ಟಿಗನೊಬ್ಬನಿಗೆ “ಭಾರತ ರತ್ನ” ಪ್ರಶಸ್ತಿ ನೀಡಲಾಯಿತು. ಆತ ಕೋಕ್ ಕುಡಿಯುತ್ತಾ ಜಾಹಿರಾತಿನಲ್ಲಿ ಕಾಣಿಸಿಕೊಂಡ ತಕ್ಷಣವೇ ಅಪ್ಪ ಮುಖ ಅರಳಿಸಿ ನುಡಿದ “ಈತನೇ ಭಾರತರತ್ನ” ಮಗು ನುಡಿಯಿತು: “ಅಪ್ಪ ಕೋಕಿನಲ್ಲಿ ವಿಷವಿದೆಯಂತೆ” ಧರ್ಮ… ಆ ಸಂತನನ್ನು ಒಬ್ಬಾತ ಕೇಳಿದ “ಧರ್ಮವೆಂದರೇನು ಗುರುಗಳೇ?” ಪಕ್ಕದಲ್ಲಿರುವ ಮಗು ಮತ್ತೊಂದು ಮಗುವಿಗೆ ಹೇಳುತ್ತಿತ್ತು – “ನಮ್ಮ ಮನೆಯಲ್ಲಿ ಒಟ್ಟು 50 ನಲ್ಲಿಗಳಿವೆ, ಎಲ್ಲದಕ್ಕೂ ನೀರು ಬರುವುದು ಮಾತ್ರ ಮೇಲಿನ ಟ್ಯಾಂಕ್ ನಿಂದ” ಸಂತ ನಕ್ಕು ನುಡಿದ – “ಅದೇ ಶ್ರೇಷ್ಟ ಉತ್ತರ, ಯೋಚಿಸು” ಅವರವರ ಭಾವ… ಮನೆಯವರ ವಿರೋಧದಿಂದ ಬೇಸರವಾಗಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡರು ಹುಡುಗಿಯ ಕಡೆಯವರು: ಪಾಪಿ ಹುಡುಗ, ನನ್ನ ಮಗಳ ಜೀವ ತಿಂದುಕೊಂಡ ಹುಡುಗನ ಕಡೆಯವರು: ದರಿದ್ರ ಹುಡುಗಿ, ನನ್ನ ಮಗನ ಜೀವ ನುಂಗಿಕೊಂಡಳು ಅಲ್ಲಿದ್ದ ಒಂದು ಮಗು: ಪಾಪಿ ಮುಂಡೆ ಮಕ್ಕಳು, ಎರಡು ಜೀವ ತಿಂದುಬಿಟ್ಟರು! ಜ್ಯೋತಿಷಿ… ಈ ಪೂಜೆ ಮಾಡಿ ನಿಮಗೆ ತಿಂಗಳಲ್ಲಿಯೇ ಕೋಟಿ ಕೋಟಿ ಲಾಭ ಬರುವಂತೆ ಮಾಡಿಕೊಡುತ್ತೇನೆ ಎಂದು ಆ ಜ್ಯೋತಿಷಿ ಹೇಳಿದ ಆತ: ಮತ್ತೆ ಪೂಜೆ ನಡೆಯಲಿ ಸ್ವಾಮಿ.. ಜ್ಯೋತಿಷಿ: ಪೂಜೆಯ ಖರ್ಚು 500 ಆಗುತ್ತದೆ…]]>





nice stories….
ಸೊಗಸಾದ ಕಥೆಗಳು. “ಧರ್ಮ” ಕಥೆ ತುಂಬ ಇಷ್ಟವಾಯಿತು:-)
Vaaw… Wonderful stories…. Liked very much…
really nice… each story attracts uniquely