ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಜೋಗಿ ಕರೆಯುತ್ತಾರೆ: ಈ ಭಾನುವಾರ ನಮ್ಮದು..

ಈ ಭಾನುವಾರ ಎಲ್ಲಿಗೆ ಹೋಗುವುದು?

ಪ್ರತಿವಾರ ಕಾಡುವ ಪ್ರಶ್ನೆ ಇದು. ಆದರೆ, ಈ ವಾರ ಅದರ ಬಗ್ಗೆ ಯೋಚಿಸಬೇಕಿಲ್ಲ, ನಾನಂತೂ ರವೀಂದ್ರ ಕಲಾಕ್ಷೇತ್ರದಲ್ಲಿರುತ್ತೇನೆ.

ಆವತ್ತು, ದೇಶಕಾಲ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ. ಅನಂತಮೂರ್ತಿ, ಗಿರೀಶ್ ಕಾರ್ನಾಡ್ ಮತ್ತು ಜಾವೇದ್ ಅಖ್ತರ್ ವೇದಿಕೆಯಲ್ಲಿರುತ್ತಾರೆ ಎಂಬ ಖುಷಿಯ ಜೊತೆ, ನೂರಾರು ಗೆಳೆಯರು, ಸಹಲೇಖಕರು ಸಿಗುತ್ತಾರೆ ಎಂಬುದು ಮತ್ತೊಂದು ಸಂತೋಷ.

ಹಳೆಯ ದಿನಗಳು ನೆನಪಾಗುತ್ತಿವೆ. ಸಂಕೇತ್ -ನಾಗಮಂಡಲ- ನಾಟಕ ಆಡಿದಾಗ ಚಿತ್ರಕಲಾ ಪರಿಷತ್ತಿನಲ್ಲಿ ಸಂಭ್ರಮ, ಅದಕ್ಕೂ ಮುಂಚೆ ಬಿವಿ ಕಾರಂತರು ಮೂರು ನಾಟಕಗಳ ಪ್ರದರ್ಶನ ಏರ್ಪಡಿಸಿ ಥ್ರಿಲ್ ಕೊಟ್ಟಿದ್ದರು. ಆಮೇಲೆ, ಕುಸುಮಬಾಲೆ ನಾಟಕದ ಪ್ರದರ್ಶನ ನಡೆಯಿತು. ಅಡಿಗರ ಭೂಮಿಗೀತ ರಂಗಕ್ಕೆ ಬಂದಾಗೊಂದು ಸಂಭ್ರಮವಿತ್ತು. ಕಾರ್ನಾಡರ ಅಗ್ನಿ ಮತ್ತು ಮಳೆಯ ಇಂಗ್ಲಿಷ್ ಪ್ರದರ್ಶನ ಕೊಟ್ಟ ಖುಷಿಯೇ ಬೇರೆ. ಇತ್ತೀಚೆಗೆ ಸೂರಿ ನಿರ್ದೇಶಿಸಿದ ಇಬ್ಬರು ಮುದುಕರ ಕತೆ ಹೇಳುವ ನಾಟಕ ನಾ ತುಕಾರಾಮ್ ಅಲ್ಲ- ಹೀಗೆ ನಮ್ಮ ಖುಷಿಯನ್ನು ಹೆಚ್ಚಿಸುವ ಹಬ್ಬಗಳು ಆಗಾಗ ನಡೆಯುತ್ತಿರುತ್ತವೆ.

ಈ ಸಲದ ಹಬ್ಬಕ್ಕೆ ವಿವೇಕ ಶಾನಭಾಗರು ನೆಪ. ಅವರು ಅಕ್ಕರೆಯಿಂದ ರೂಪಿಸಿದ ದೇಶಕಾಲ ವಿಶೇಷ ಸಂಚಿಕೆಯ ಬಿಡುಗಡೆ ಮತ್ತೊಂದು ನೆಪ. ಬೆಳಗ್ಗೆ ಒಂಬತ್ತೂವರೆಗೆಲ್ಲ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸೇರಿ, ಒಂದಿಷ್ಟು ಕಾಫಿ ಕುಡಿದು, ಹರಟುತ್ತಾ ನಮ್ಮ ಜ್ಞಾಪಕ ಚಿತ್ರಶಾಲೆಯನ್ನು ಅಲಂಕರಿಸಿಕೊಳ್ಳೋಣ.

ಬರ್ತೀರಲ್ಲ, ಈ ಭಾನುವಾರ ನಮ್ಮದು

‍ಲೇಖಕರು avadhi

24 April, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. ವಸುಧೇಂದ್ರ

    ಜೋಗಿ,

    ನಾನೂ ಬರುತ್ತಿದ್ದೇನೆ. ಎಲ್ಲಾ ಸಾಹಿತ್ಯಾಸಕ್ತರ, ಗೆಳೆಯರ ಜೊತೆ ಹರಟೆ ಹೊಡೆಯಬಹುದೆಂಬ ಖುಷಿ ಈ ಕಾರ್ಯಕ್ರಮವನ್ನು ಎದುರು ನೋಡುವಂತೆ ಮಾಡಿದೆ.

    ವಸುಧೇಂದ್ರ

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading