-ದಿನಕರ ದೇಸಾಯಿ

ದಿನಕರನ ಚುಟುಕ
ಇಂದ್ರ ದೇವನ ಮೊನ್ನೆ ಮಾಡಿ ಟೆಲಿಫೋನು
ಕೇಳಿದನು:ದೇಸಾಯಿ, ಹೇಗಿದ್ದಿ ನೀನು?
ನನ್ನ ರಂಭೆಗೆ ನಿನ್ನ ಚುಟುಕಗಳ ಹುಚ್ಚು
ಪ್ರತಿ ಕಳಿಸಿ ಅದು ನನ್ನ ಲೆಕ್ಕಕ್ಕೆ ಹಚ್ಚು
ಅಂಕೋಲೆ ಹುಡುಗಿ
ಗೋಕರ್ಣದಿಂದ ಉತ್ತರಕ್ಕೆ ಅಂಕೋಲೆ
ಇಲ್ಲುಂಟು ದೇಸಾಯಿ ದಿನಕರನ ಬಾಲೆ
ಎಲ್ಲರನ್ನೂ ಕೆಣಕುವಳು ಈ ತುಂಟ ಹುಡಗಿ
ಹಿಡಿಯ ಹೋದರೆ ಕುಳಿತುಕೊಳ್ಳುವಳು ಅಡಗಿ
ಅಂಕೋಲೆ ಉಪ್ಪು
ಗೃಹಮಂತ್ರಿ ಹೇಳಿದರು: ಎಲೆ ಚುಟುಕ ಜೋಕೆ
ಅತ್ಯಂತ ಉಗ್ರವಾಗಿದೆ ನಿನ್ನ ಟೀಕೆ.
ಚುಟುಕವೆಂದಿತು: ನನಗೆ ಹಾಕುವೆನೆ ಸೊಪ್ಪು
ನಾನು ಅಂಕೋಲೆ ಸತ್ಯಾಗ್ರಹದ ಉಪ್ಪು.
ಅಹಿಂಸಾಮಯ ಯುದ್ಧ
ಲೇಖನಿಯ ಹಿಡಿದು ಸರಕಾರದ ವಿರುದ್ಧ
ಪ್ರತಿ ದಿವಸವೂ ನಾನು ಹೂಡಿದೆನು ಯುದ್ಧ.
ಬಂದೂಕುಗಳ ಬದಲು ಚುಟುಕಗಳ ಬಾಣ.
ಎಷ್ಟು ಚುಚ್ಚಿದರೇನು ? ಬಿಡಲಿಲ್ಲ ಪ್ರಾಣ!
ಅಂಬಿಕಾತನಯದತ್ತರ ಕೃತಿ
ಅಂಬಿಕಾತನಯದತ್ತರ ಕೃತಿಯನೋದು
ಭಾವನಾಲೋಕದಲಿ ಅದು ಒಂದು ಜಾದು.
ಅರಗಳಿಗೆಯಲಿ ನೀನು ಮಂಗಳಕ್ಕೆ ಹಾರಿ.
ಕುಳಿತುಕೊಳಬಹುದು ಬ್ರಹ್ಮಾಂಡಗಳನೇರಿ.





tumba ista aaytu.