ಹೈಸ್ಕೂಲು ದಿನಗಳಿಂದಲೂ ಪತ್ರಕರ್ತರ ಬಗ್ಗೆ ನನಗೆ ವಿಲಕ್ಷಣವಾದ ಕುತೂಹಲ ಬೆಳೆದಿತ್ತು. ಯಾವ ಹಾಲಿವುಡ್ ಹೀರೋನ ಸಾಹಸಗಳಿಗೂ ಕಡಿಮೆಯಿರದ ‘ಹಾಯ್ ಬೆಂಗಳೂರ್’ ಸಂಪಾದಕರಾದ ರವಿ ಬೆಳಗೆರೆಯವರ ಚಿತ್ರ ವಿಚಿತ್ರ ಸಾಧನೆಗಳು, ಮೈಲುಗಲ್ಲುಗಳು ಹಾಗೂ ರೋಮಾಂಚನಕಾರಿ ಸಾಹಸಗಳು, ಅವುಗಳಷ್ಟೇ ಥ್ರಿಲ್ಲಿಂಗಾಗಿರುತ್ತಿದ್ದ ಅವರ ಬರವಣಿಗೆ ಪತ್ರಕರ್ತ ಎಂದರೆ ಸಿನೆಮಾದಲ್ಲಿ ಅಕರಾಳ-ವಿಕಾರಾಳವಾಗಿ ಮುಖಭಾವ ಪ್ರಕಟಿಸುತ್ತಾ ಆಕ್ರಮಣ ಮಾಡುವ ಹತ್ತಾರು ಮಂದಿ ದಾಂಢಿಗರಿಗೆ ಒದೆ ಕೊಟ್ಟು ಗರಿ ಮುರಿಯದ ಶರ್ಟನ್ನೊಮ್ಮೆ ಕೊಡವಿ ನಿಂತು ಕೈ ಬೀಸುವ ಸಣಕಲ ಹೀರೋನ ಹಾಗೆ ಎಂಬ ಭ್ರಮೆಯನ್ನು ಮೂಡಿಸುತ್ತಿದ್ದವು
ಪತ್ರಿಕೋದ್ಯಮವೆಂಬುದು ಅತ್ಯಂತ ತ್ಯಾಗಮಯವಾದ, ನಿಸ್ವಾರ್ಥದಿಂದ ಕೂಡಿದ ಉದ್ಯಮ ಎಂಬುದು ಆಗಿನ ಗ್ರಹಿಕೆಯಾಗಿತ್ತು. ಸತ್ಯದ ಉಪಾಸಕರನ್ನು ಪತ್ರಕರ್ತರು ಎಂಬ ಹೆಸರಿನಿಂದ ಕರೆಯುತ್ತಾರೆ, ಜಗತ್ತಿಗೆ ಎಂದಾದರೂ ಪ್ರಾಮಾಣಿಕತೆ, ನಿಷ್ಠುರತೆ, ವಸ್ತುನಿಷ್ಠತೆ, ಧೈರ್ಯಗಳ ಕೊರತೆ ಬಿದ್ದರೆ ಇವರಿಂದ ಕಡ ಪಡೆಯಬಹುದು ಎಂಬುದು ಮುಗ್ಧ ನಂಬಿಕೆಯಾಗಿತ್ತು. ಪತ್ರಿಕೆಗಳಲ್ಲಿ ಪ್ರಕಟವಾಗುವುದು ಗಾಸ್ಪೆಲ್ ಟ್ರುಥ್ ಎಂದು ಈಗಲೂ ಶ್ರದ್ಧೆಯಿಂದ ನಂಬುವ ‘ಭಕ್ತಾದಿ’ಗಳಲ್ಲಿ ನಾನೂ ಒಬ್ಬನಾಗಿದ್ದೆ. ಪತ್ರಿಕೆಗಳ ಬಗ್ಗೆ, ಪತ್ರಕರ್ತರ ಬಗ್ಗೆ ನನ್ನ ಕ್ರೇಜು ಅದೆಷ್ಟರ ಮಟ್ಟಿಗೆ ಹುಚ್ಚುತನದ ಪರಿಧಿಯನ್ನು ಮುಟ್ಟುತ್ತಿತ್ತೆಂದರೆ ನ್ಯೂಸ್ ಸ್ಟಾಂಡಿನಲ್ಲಿ ಕಣ್ಣಿಗೆ ಬೀಳುವ ಪ್ರತಿಯೊಂದು ಹೊಸ ಪತ್ರಿಕೆಯನ್ನೂ ತಂದಿಟ್ಟುಕೊಂಡು ಜೋಪಾನ ಮಾಡುತ್ತಿದ್ದೆ.
ಪೂರ್ಣ ಓದಿಗೆ: ಮೀಡಿಯಾ ಮೈಂಡ್





0 Comments