ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಪುಸ್ತಕ ಪ್ರಾಧಿಕಾರದ ಪ್ರಶಸ್ತಿ ಪ್ರಕಟ: ಬಸವರಾಜ ಕಲ್ಗುಡಿ, ಐಬಿಹೆಚ್ ಪ್ರಕಾಶನಕ್ಕೆ ಗರಿ

ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಹಾಗೂ ಬಹುಮಾನಗಳನ್ನು ಘೋಷಿಸಲಾಗಿದ್ದು ಹಿರಿಯ ಸಾಹಿತಿ, ಚಿಂತಕ ಡಾ. ಬಸವರಾಜ ಕಲ್ಗುಡಿ ಅವರನ್ನು ಡಾ. ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ ನೀಡಲಾಗುವ ಅತ್ಯುತ್ತಮ ಪ್ರಕಾಶನ ಪ್ರಶಸ್ತಿಯನ್ನು ಐಬಿಹೆಚ್ ಪ್ರಕಾಶನಕ್ಕೆ ನೀಡಲಾಗಿದೆ.

ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರತೀ ವರ್ಷವೂ ನೀಡಲಾಗುವು ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿಗೆ ಈ ವರ್ಷ ಇಬ್ಬರನ್ನು ಆಯ್ಕೆ ಮಾಡಲಾಗಿದೆ. ಸಿಂಧಗಿಯ ಶ್ರೀ ಎಂ.ಎನ್. ಪಡಶೆಟ್ಟಿ ಹಾಗೂ ಬೆಂಗಳೂರಿನ         ಶ್ರೀ ಕೆ. ರಾಜಕುಮಾರ್ ಅವರು ಈ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. 

ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿಯನ್ನು ಡಾ|| ಬಿ.ಎಂ. ಹೆಗ್ಗಡೆ ಅವರಿಗೆ ನೀಡಲಾಗಿದೆ ಎಂದು ಡಾ. ಎಂ.ಎನ್. ನಂದೀಶ್ ಹಂಚೆ ತಿಳಿಸಿದ್ದಾರೆ. 

ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ರೂ.1.00ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ ರೂ.75,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಡಾ. ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ ರೂ.50,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ಡಾ|| ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ರೂ.25,000-00 ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

ವಾರ್ಷಿಕ ಪುಸ್ತಕ ಸೊಗಸು ಹಾಗೂ ಮುದ್ರಣ ಸೊಗಸು ಬಹುಮಾನಗಳಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.

ಮೊದಲನೇ ಬಹುಮಾನ
25,000-00 ಸಪ್ನ ಬುಕ್ ಹೌಸ್
ಬೆಂಗಳೂರು ಡಾ. ಬಿ.ಆರ್. ಅಂಬೇಡ್ಕರ್ ಮಹಾಮಾನವನ ಮಹಾಯಾನ ಡಾ. ಸಿ. ಚಂದ್ರಪ್ಪ

ಎರಡನೇ ಬಹುಮಾನ
20,000-00 ನಮ್ಮ ಪ್ರಕಾಶನ
ತುಮಕೂರು ಭೂಮಿಯೊಂದು ಮಹಾಬೀಜ ಕೃಷ್ಣಮೂರ್ತಿ ಬಿಳಿಗೆರೆ

ಮೂರನೇ ಬಹುಮಾನ
10,000-00 ಅಭಿರುಚಿ ಪ್ರಕಾಶನ
ಮೈಸೂರು ಬಂಗಾರದ ಮನುಷ್ಯರು ಭಾಗ-1
ಬೆಳಕಿನ ಬೇಸಾಯದ ಕಥಾನಕ ಶ್ರೀ ಚಿನ್ನಸ್ವಾಮಿ ವಡ್ಡಗೆರೆ

ಮಕ್ಕಳ ಪುಸ್ತಕ ಸೊಗಸು ಬಹುಮಾನ
8,000-00 ಚೈತ್ರೋದಯ ಪ್ರಕಾಶನ
ಹಾಸನ ಅರಳುವ ಹೂಗಳು ಶ್ರೀಮತಿ ಸುಶೀಲಾ ಸೋಮಶೇಖರ್

‍ಲೇಖಕರು avadhi

7 October, 2020

1 Comment

  1. T S SHRAVANA KUMARI

    ಪ್ರಶಸ್ತಿ ವಿಜೇತರೆಲ್ಲರಿಗೂ ಹಾರ್ದಿಕ ಅಭಿನಂದನೆಗಳು

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading