ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಬಯಲು ಆಲಯವೆರಡು ತನ್ನೊಳಗೆ ಎನುವಂತೆ

ಒಂಟಿಮರ..ಬುದ್ಧ ಮತ್ತು ನಾವು

ಎನ್.ಕೃಷ್ಣಮೂರ್ತಿ

ವಿಶಾಲದೊಳಗೊಂದು ಒಂಟಿ ಮರ ಬಯಲು ಆಲಯವೆರಡು ತನ್ನೊಳಗೆ ಎನುವಂತೆ ಹಠಯೋಗಿ ಅನ್ನಿಸೊಲ್ಲ ಕಾರಣ ಮರ ಮಧ್ಯಾಹ್ನದ ಬಿಡುವಿನಲ್ಲಿ ಧ್ಯಾನಿಸುತ್ತೆ ಸಂಭ್ರಮಿಸುತ್ತೆ ಕೊಳಲ ಹುಡುಗನ ತುಂಟಾಟಕೆ ಮತ್ತು ಮಿಡಿಯುತ್ತೆ ಋತುಚಕ್ರದಾಟಕ್ಕೂ… ಮತ್ತದರಡಿಯಲ್ಲಿ ಆರೋ ನಡೆದುಹೋದ ಪಾದದೆಳೆ ಶುದ್ಧನಾದ ಬುದ್ಧನವೇ.. ಮರ ಮೌನ ಮತ್ತು ನೆರಳು ದೂರದಲ್ಲಿ ಕಿತ್ತ ಸಂಕೋಲೆಗೆ ಯಶೋಧರೆಯ ಅಳು ಸಂಜೆ ಮರದೆದೆಗೆ ಹಿಂತಿರುಗೆ ಹಕ್ಕಿ-ಪಕ್ಕಿ ಮಿಲನ ಮಾತುಕತೆ ಮಿಥುನ ಮರಿ ಚಿಗುರಿ ಯಾ ಗರಿಯುದುರಿ ಧ್ಯಾನದಿಂದೆದ್ದು ಮರ ಕಣ್ಣರಳಿಸುತ್ತೆ ಸಂಜೆ ಸೂರ್ಯನ ಬಣ್ಣಕ್ಕೆ ಮೈಮರೆಯುತ್ತೆ ಎದೆಗೂಡಿನೊಳಗೆ ಎಷ್ಟೊಂದು ಜೀವಕ್ಕೆ ತಾಯಿಯಾಗುತ್ತೆ ತನ್ನೊಳಗೆ ತಾನೇ ಅಚ್ಚರಿಯಂಬಂತೆ… ಮರಕ್ಕೀಗ ಜ್ಞಾನೋದಯ ಯಾರೋ ಅದರೆಡೆಗೆ ಬರುತ್ತಿರುವಂತೆ ಬುದ್ಧನೇ…ಇರಬಹುದು ಮರ ಜೀವನ್ಮುಖಿ ಯಶೋಧರೆ ಶಾಪವಳಿದು ಸುಖಿ…!]]>

‍ಲೇಖಕರು G

23 September, 2012

1 Comment

  1. mmshaik

    NICE..HEART TOUCHING…!

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading