ಪ್ರತಿ ವರ್ಷದಂತೆ ಈ ಬಾರಿಯೂ ಇಲ್ಲಿಯ ಸಂಧ್ಯಾ ಸಾಹಿತ್ಯ ವೇದಿಕೆಯು ಬಾಲ ಬರಹಗಾರರಿಗೆ “ವಿದ್ಯಾಸಾಗರ ಬಾಲ ಪುರಸ್ಕಾರ” ಮತ್ತು ಮಕ್ಕಳಿಗಾಗಿ ಕತೆ ಬರೆಯುವ ಹಿರಿಯರಿಗೆ “ಮೇವುಂಡಿ ಮಲ್ಲಾರಿ ಕಥಾ ಪುರಸ್ಕಾರ” ನೀಡುತ್ತಿದ್ದು, ಅರ್ಜಿ ಆಹ್ವಾನಿಸಿದೆ.

ಬಾಲ ಬರಹಗಾರರು ಒಂದು ಸಂಕಲನಕ್ಕಾಗುವಷ್ಟು ಯಾವುದೇ ಪ್ರಕಾರದ ಕನ್ನಡ ಬರಹಗಳನ್ನು ಕಳುಹಿಸಬಹುದು.
ಕಥೆಗಳು ಕಳೆದ ಅಕ್ಟೋಬರ್ನಿಂದ ವರ್ಷದ ಅವಧಿಯೊಳಗೆ ರಚಿಸಿದವುಗಳಾಗಿರಬೇಕು.
ಬರಹಗಳನ್ನು ಅಧ್ಯಕ್ಷರು, ಸಂಧ್ಯಾ ಸಾಹಿತ್ಯ ವೇದಿಕೆ, ಅಮೃತ ನಿವಾಸ, ಸಿ.ಬಿ. ಕಮಾನಿನ ಹತ್ತಿರ, ಶಹಾಪುರ(ಯಾದಗಿರಿ ಜಿಲ್ಲೆ) ಇಲ್ಲಿಗೆ ಸೆ. 30ರೊಳಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ ಮೊ. 9448651520/9986590894ಕ್ಕೆ ಸಂಪರ್ಕಿಸಬಹುದು.
ಮಕ್ಕಳ ಬರಹಕ್ಕೆ ಪುರಸ್ಕಾರ, ಅರ್ಜಿ ಆಹ್ವಾನ
ನಿಮಗೆ ಇವೂ ಇಷ್ಟವಾಗಬಹುದು…




ನಾಳೆಯ ಇತಿಹಾಸ ಇಂದೆ ಇಡೇರಬೇಕು