ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಮಮತಾ ಅರಸೀಕೆರೆ, ಮಹಾಂತೇಶ ಪಾಟೀಲ್ ಗೆ ಗವಿಸಿದ್ಧ ಬಳ್ಳಾರಿ ಕಾವ್ಯ ಪ್ರಶಸ್ತಿ…

ರಾಜ್ಯಮಟ್ಟದಲ್ಲಿ ಪ್ರತಿ ವರ್ಷ ಕಾವ್ಯದ ಹಸ್ತಪ್ರತಿಗೆ ಕೊಡಮಾಡುವ ‘ಗವಿಸಿದ್ಧ ಎನ್. ಬಳ್ಳಾರಿ – ಕಾವ್ಯ ಪ್ರಶಸ್ತಿ’ಯು
ಈ ವರ್ಷ (2022 ನೇ ಸಾಲಿನ) ದಾವಣಗೆರೆಯ ಡಾ. ಮಹಾಂತೇಶ ಪಾಟೀಲ್ ರ ‘ಚಲಿಸುವ ಮೋಡಗಳು’ ಮತ್ತು ಮಮತಾ ಅರಸೀಕೆರೆಯವರ ‘ನೀರ ಮೇಲಿನ ಮುಳ್ಳು’ ಹಸ್ತಪ್ರತಿಗಳಿಗೆ ಲಭಿಸಿದೆ.

ಈ ವರ್ಷ ಒಟ್ಟು 61 ಹಸ್ತಪ್ರತಿಗಳು ಬಂದಿದ್ದವು. ಇವುಗಳಲ್ಲಿ – 10 ಹಸ್ತಪ್ರತಿಗಳು ಸೆಮಿಫೈನಲ್ ಸುತ್ತಿಗೆ ಮತ್ತು ನಂತರ 5 ಹಸ್ತಪ್ರತಿಗಳು ಕೊನೆಯ ಸುತ್ತಿಗೆ ಆಯ್ಕೆಯಾಗಿದ್ದವು.

ಹಿರಿಯ ಬಂಡಾಯ ಕವಿಗಳು, ಹೋರಾಟಗಾರರಾದ ಅಲ್ಲಮಪ್ರಭು ಬೆಟ್ಟದೂರ ಮತ್ತು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಸಾಹಿತಿಗಳಾದ ಎಚ್.ಎಸ್. ಪಾಟೀಲರು ಕೊನೆಯ ಸುತ್ತಿನ ತೀರ್ಪುಗಾರರಾಗಿದ್ದರು.

ಪ್ರಶಸ್ತಿಯು ತಲಾ ಆರು ಸಾವಿರ ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದ್ದು, ಪ್ರಶಸ್ತಿಯನ್ನು ಕೊಪ್ಪಳದಲ್ಲಿ ಅಕ್ಟೋಬರ್ 16, 2022 ರಂದು ನಡೆಯುವ ‘ಗವಿಸಿದ್ಧ ಎನ್. ಬಳ್ಳಾರಿ – ಸಾಹಿತ್ಯೋತ್ಸವ’ದಲ್ಲಿ ವಿತರಿಸಲಾಗುವುದು ಎಂದು ‘ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ’ಯ ಪರವಾಗಿ ಮಹೇಶ ಬಳ್ಳಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‍ಲೇಖಕರು Admin

22 June, 2022

1 Comment

  1. ಸುನಂದಾ ಕಡಮೆ

    ಅಕ್ಕರೆ ತುಂಬಿದ ಅಭಿನಂದನೆ ಪ್ರಿಯ ಮಮತಾ..

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading