ಶಾ. ಬಾಲೂರಾವ್ ಯುವಬರಹಗಾರ ಪ್ರಶಸ್ತಿಗಾಗಿ ಕೃತಿಗಳ ಆಹ್ವಾನ
ಬಿ.ಎಂ.ಶ್ರೀ ಪ್ರತಿಷ್ಠಾನವು ಪ್ರತಿವರ್ಷ ನೀಡುವ ಇಪ್ಪತ್ತೈದು ಸಾವಿರ ರೂಪಾಯಿಗಳ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುವ ಶಾ.ಬಾಲೂರಾವ್ ಯುವಬರಹಗಾರ ಪ್ರಶಸ್ತಿಗಾಗಿ ೩೫ ವರ್ಷ ವಯಸ್ಸು ಮೀರದ ಯುವ ಬರಹಗಾರರು ರಚಿಸಿದ
೨೦೧೮ರಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾಗಿರುವ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳನ್ನು ಆಹ್ವಾನಿಸುತ್ತಿದೆ.
ಆಸಕ್ತ ಲೇಖಕರು ಪ್ರಕಟಗೊಂಡ ಕೃತಿಯ ಎರಡು ಪ್ರತಿಗಳನ್ನು ತಮ್ಮ ವಿವರಗಳ ಜೊತೆ
ಗೌರವ ಕಾರ್ಯದರ್ಶಿ, ಬಿ.ಎಂ.ಶ್ರೀ. ಪ್ರತಿಷ್ಠಾನ, ೩ನೇ ಮುಖ್ಯರಸ್ತೆ, ನರಸಿಂಹರಾಜ ಕಾಲೋನಿ, ಬೆಂಗಳೂರು-೫೬೦೦೧೯, ಇವರಿಗೆ ಕಳುಹಿಸಬಹುದು.
ಕೊನೆಯ ದಿನಾಂಕ : ೩೦ನೇ ಜುಲೈ ೨೦೧೯
ಸಂಪರ್ಕಿಸಿ : ೦೮೦-೨೬೬೧೫೮೭೭/ ೨೬೬೭೬೭೭೩






0 Comments