‘ವೀರಲೋಕ’ದಿಂದ ಉತ್ತರಪರ್ವ

ಸಾಮಾನ್ಯವಾಗಿ ಸಾಹಿತ್ಯಲೋಕದಲ್ಲಿ ಕೇಳಿಬರುವ ಮಾತು… ಎಲ್ಲಾ ಪ್ರಶಸ್ತಿಗಳು, ವೇದಿಕೆಗಳು, ಅಧಿಕಾರ, ಅವಕಾಶಗಳು ಒಂದು ಭಾಗದ ಜನರಿಗೇ ದಕ್ಕುತ್ತವೆ. ನಾವೇನು ತಪ್ಪು ಮಾಡಿದ್ದೇವೆ? ಇದು ಕರ್ನಾಟಕದ ವಿವಿಧ ಭಾಗದ ಜನರ ಸಾಮಾನ್ಯ ಆಕ್ರೋಶ! ಈ ಭಾವನೆಯನ್ನು ಸಂಪೂರ್ಣವಾಗಿ ಹೋಗಲಾಡಿಸುವ ಶಕ್ತಿ ನಮಗಿಲ್ಲವಾದರೂ, ನಾವು ಮಾಡುವ ಕೆಲಸದಲ್ಲಿಯೇ ಆ ನಿಟ್ಟಿನಲ್ಲಿ ಒಂದೆರಡು ಹೆಜ್ಜೆ ಇಡಬಹುದಾ ಅಂತ ಭಾವಿಸಿ ಕೈಗೊಂಡ ಯೋಜನೆಯೇ ಈ ಉತ್ತರಪರ್ವ.

ಈ ಯೋಜನೆ ಅಡಿಯಲ್ಲಿ ಉತ್ತರ ಕರ್ನಾಟಕದ ಲೇಖಕರ ಹತ್ತು ಕೃತಿಗಳನ್ನು ಪ್ರಕಟಿಸುತ್ತಿದ್ದೇವೆ. ಅಷ್ಟು ಮಾತ್ರವಲ್ಲದೆ, ಉತ್ತರ ಕರ್ನಾಟಕದ ಲೇಖಕರನ್ನು ಬೆಂಗಳೂರಿಗೆ ಆಹ್ವಾನಿಸಿ, ಆ ಕೃತಿಗಳ ಬಿಡುಗಡೆ ಸಮಾರಂಭವನ್ನು ಬೆಂಗಳೂರಿಗರ ಸಮ್ಮುಖದಲ್ಲಿ ಬಿಡುಗಡೆಗೊಳಿಸುತ್ತಿದ್ದೇವೆ. ಕರ್ನಾಟಕದ ಆ ಭಾಗದವರನ್ನು ಈ ಭಾಗದವರ ಜೊತೆ ಮುಖಾಮುಖಿಯನ್ನಾಗಿಸುತ್ತಿದ್ದೇವೆ ಎನ್ನುತ್ತಾರೆ ವೀರಲೋಕದ ಮುಂದಾಳು ವೀರಕಾಪುತ್ರ ಶ್ರೀನಿವಾಸ್.

ರಾಜಧಾನಿಯಲ್ಲಿರುವವರು ಮಾತ್ರ ಮುಖ್ಯರಲ್ಲ, ಪ್ರತಿಭಾವಂತರಲ್ಲ ಎಂಬುದನ್ನು ಸೂಚ್ಯವಾಗಿ ಹೇಳಲು ಹೊರಟಿದ್ದೇವೆ. ಇದೊಂದು ರೀತಿ ಉಳಿದ ಭಾಗದ ಜನರಿಗೆ ಆತ್ಮವಿಶ್ವಾಸ ತುಂಬುವ ಕೆಲಸ.

ಈ ಮಹತ್ತರ ಯೋಜನೆಗೆ ಉತ್ತರ ಕರ್ನಾಟಕ ಮತ್ತು ದಕ್ಷಿಣದ ನಡುವೆ ಸೇತುವೆಯಂತೆ ಬದುಕುತ್ತಿರುವ ಮತ್ತು ಬರೆಯುತ್ತಿರುವ ರಾಗಂ ಅವರನ್ನು ಸಂಪಾದಕರನ್ನಾಗಿಸಿದ್ದೆವು. ಈ ಯೋಜನೆಗೆ ಸುಮಾರು ನೂರು ಕೃತಿಗಳು ಬಂದಿದ್ದವು. ಓದುಗರಿಗೆ ಒಳ್ಳೆಯದನ್ನೇ ನೀಡಬೇಕೆಂಬ ಉದ್ದೇಶದಿಂದ ಮೂರು ಹಂತದ ಆಯ್ಕೆ ಪ್ರಕ್ರಿಯೆ ನಡೆಸಿ, ನೂರರಲ್ಲಿ ಹತ್ತು ಕೃತಿಗಳನ್ನು ಆಯ್ದು ಪ್ರಕಟಿಸುತ್ತಿದ್ದೇವೆ. ಅವು ಯಾವುವೆಂದರೆ…

  1. ಶೇಕ್ಷಾವಲಿ ಮಣಿಗಾರ – ಆ ವದನ
  2. ಮರ್ತುಜಾಬೇಗಂ ಕೊಡಗಲಿ – ಪರಸ್ಪರ ಮತ್ತಿತರ ಕೃತಿಗಳು
  3. ಡಾ.ಸದಾಶಿವ ದೊಡಮನಿ – ಇರುಳ ಬಾಗಿಲಿಗೆ ಕಣ್ಣ ದೀಪ
  4. ರವೀಂದ್ರ ಮುದ್ದಿ – ವರದಾ ತೀರದ ಕಥೆಗಳು
  5. ಸಿ.ವಿ.ವೀರುಪಾಕ್ಷ – ಖದೀಜಾ
  6. ಶ್ರೀಧರ ಗಸ್ತಿ – ಚಂದ್ರಾ ಲೇಔಟ್
  7. ಪ್ರಕಾಶ ಗಿರಿಮಲ್ಲನವರ – ಜನನಾಯಕ
  8. ಬಿಜೆ ಪಾರ್ವತಿ ವಿ. ಸೋನಾರೆ – ಓಡಿ ಹೋದಾಕಿ
  9. ಕವಿತಾ ಹೆಗಡೆ ಅಭಯಂ – ಇತ್ತ ಹಾಯಲಿ ಚಿತ್ತ
  10. ನವ್ಯ ಆರ್ ಕತ್ತಿ – ಮಾಯಾ ಗುಹೆ

ಆಯ್ಕೆಯಾದ ಈ ಎಲ್ಲ ಲೇಖಕರ ಕೃತಿಗಳು ದಿ: 04-08-2024 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ, ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಲೋಕಾರ್ಪಣೆಗೊಳ್ಳಲಿವೆ. ಅತಿಥಿಗಳಾಗಿ ಖ್ಯಾತ ಚಲನಚಿತ್ರ ನಿರ್ದೇಶಕರಾದ ಶ್ರೀ ಬಿ.ಸುರೇಶ, ಲೇಖಕರಾದ ರಾಗಂ, ಕರ್ಕಿ ಕೃಷ್ಣಮೂರ್ತಿ, ಮಧು ವೈ.ಎನ್ ಅವರು ಇರಲಿದ್ದಾರೆ.

‍ಲೇಖಕರು avadhi

August 3, 2024

ನಿಮಗೆ ಇವೂ ಇಷ್ಟವಾಗಬಹುದು…

ಬೆಂಬಿಡದ ದಾಹ

ಬೆಂಬಿಡದ ದಾಹ

** ಎದ್ದೆ. ಕಣ್ಬಿಟ್ಟಾಗ ರೂಮು ಅರೆ ಕತ್ತಲಾಗಿತ್ತು, ಫ್ಯಾನ್ ಎರಡರ ಸ್ಪೀಡಿನಲ್ಲಿ ತಿರುಗುತ್ತಿತ್ತು, ಮೊಬೈಲ್ ಚಾರ್ಜ್ ಆಗುತ್ತಿತ್ತು,...

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ.  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ...

0 Comments

Submit a Comment

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This