ಸದಾನಂದ ಸುವರ್ಣರು ಇನ್ನಿಲ್ಲ

ಹಿರಿಯ ರಂಗ ತಪಸ್ವಿ ಸದಾನಂದ ಸುವರ್ಣ ಇನ್ನಿಲ್ಲ..

**

ಗಿರಿಧರ ಕಾರ್ಕಳ

ಹಿರಿಯ ನಾಟಕಕಾರ, ಚಲನಚಿತ್ರ ರಂಗ ನಿರ್ದೇಶಕ, ಸದಾನಂದ ಸುವರ್ಣ ಅವರು ವಯೋಸಹಜ ಅನಾರೋಗ್ಯದಿಂದ ಇಂದು ತಮ್ಮ 92ನೇ ವಯಸ್ಸಿನಲ್ಲಿ ನಿಧನರಾದರು.

ಕನ್ನಡ ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ನಿರ್ದೇಶಿಸಿದ, ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಸದಭಿರುಚಿಯ ಸಿನೆಮಾಗಳನ್ನು, ಗುಡ್ಡೆದ ಭೂತದಂತಹ ಧಾರಾವಾಹಿ,ಶಿವರಾಮ ಕಾರಂತರ ಕುರಿತು ಆಪ್ತ ನೋಟವನ್ನು ನೀಡುವ ಸಾಕ್ಷ್ಯಚಿತ್ರ, ಧಾರಾವಾಹಿಗಳನ್ನು ಕೊಟ್ಟ ರಂಗಭೂಮಿಯ ಹಿರಿಯಜ್ಜ – ಸದಾನಂದ ಸುವರ್ಣ.

ಸ್ವತಃ ನಟ ನಾಟಕಕಾರನಾಗಿ, ಪ್ರಯೋಗಶೀಲ ನಿರ್ದೇಶಕನಾಗಿ ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ತಮ್ಮ ಇಳಿವಯಸ್ಸಿನಲ್ಲಿ ಮಂಗಳೂರಿನ ರಂಗಭೂಮಿಗೆ ಲಗ್ಗೆಯಿಟ್ಟು ಅಲ್ಲಿಯೂ ತನ್ನ ಸೃಜನಶೀಲ ಪ್ರತಿಭೆಯ ಸುವರ್ಣ ಛಾಪನ್ನು ಒತ್ತಿದವರು..!!ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ

ಉರುಳು ,ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ, ಮುಂತಾದ ನಾಟಕಗಳನ್ನು ನಿರ್ದೇಶಿಸಿ ಸದಭಿರುಚಿಯ ರಂಗ ಕಾಯಕ ಹೇಗಿರಬೇಕು ಎಂದು ನಿರೂಪಿಸಿದವರು.

ತಾನೂ ಬೆಳೆಯುತ್ತ ನೂರಾರು ಹಿರಿಯ ಕಿರಿಯ ಕಲಾವಿದರನ್ನೂ ಬೆಳೆಸಿದ ಅನನ್ಯ ರಂಗ ತಪಸ್ವಿ ನಮ್ಮ ಸದಾನಂದ ಸುವರ್ಣ.

ಮುಂಬಯಿ ಮತ್ತು ಮಂಗಳೂರಿನ ಹವ್ಯಾಸಿರಂಗಭೂಮಿಗೆ ಸುವರ್ಣರ ಕೊಡುಗೆ ಅನನ್ಯವಾದುದು.

ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಆವೃತ್ತಿಯ ಸಂಪಾದಕರಾಗಿದ್ದ ಲೇಖಕಿ ದಿ.ಸೀತಾಲಕ್ಷ್ಮಿ ಕರ್ಕಿಕೋಡಿಯವರು ಸದಾನಂದ ಸುವರ್ಣರ ರಂಗ ಸಾಧನೆಯ ಕುರಿತೇ “ರಂಗ ಜಂಗಮ ಸದಾನಂದ ಸುವರ್ಣ” ಅನ್ನುವ ಸಂಶೋಧನಾ ಪ್ರಬಂಧವನ್ನು ಮುಂಬಯಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಡಾಕ್ಟರೇಟ್ ಪಡೆದಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.

ಅಗಲಿದ ರಂಗಭೂಮಿಯ ಹಿರಿಯಜ್ಜನವರಿಗೆ ಗೌರವಪೂರ್ವಕ ನಮನಗಳು.

‍ಲೇಖಕರು avadhi

July 16, 2024

ನಿಮಗೆ ಇವೂ ಇಷ್ಟವಾಗಬಹುದು…

‘ವೀರಲೋಕ’ದಿಂದ ಉತ್ತರಪರ್ವ

‘ವೀರಲೋಕ’ದಿಂದ ಉತ್ತರಪರ್ವ

ಸಾಮಾನ್ಯವಾಗಿ ಸಾಹಿತ್ಯಲೋಕದಲ್ಲಿ ಕೇಳಿಬರುವ ಮಾತು… ಎಲ್ಲಾ ಪ್ರಶಸ್ತಿಗಳು, ವೇದಿಕೆಗಳು, ಅಧಿಕಾರ, ಅವಕಾಶಗಳು ಒಂದು ಭಾಗದ ಜನರಿಗೇ ದಕ್ಕುತ್ತವೆ....

ಬೆಂಬಿಡದ ದಾಹ

ಬೆಂಬಿಡದ ದಾಹ

** ಎದ್ದೆ. ಕಣ್ಬಿಟ್ಟಾಗ ರೂಮು ಅರೆ ಕತ್ತಲಾಗಿತ್ತು, ಫ್ಯಾನ್ ಎರಡರ ಸ್ಪೀಡಿನಲ್ಲಿ ತಿರುಗುತ್ತಿತ್ತು, ಮೊಬೈಲ್ ಚಾರ್ಜ್ ಆಗುತ್ತಿತ್ತು,...

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಶ್ರೀನಿವಾಸ ಪ್ರಭು ಅಂಕಣ: ಅಂತೂ ನಾಟಕ ಅಕಾಡೆಮಿ ಪ್ರಶಸ್ತಿ ಹುಡುಕಿಕೊಂಡು ಬಂತು!

ಕನ್ನಡ ಕಂಡ ಮಹತ್ವದ ನಟ-ನಿರ್ದೇಶಕರಲ್ಲಿ ಶ್ರೀನಿವಾಸ ಪ್ರಭು ಅವರಿಗೆ ಮುಖ್ಯ ಸ್ಥಾನವಿದೆ.  ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡದಲ್ಲಿ...

0 Comments

Submit a Comment

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This