ಅಹರ್ನಿಶಿ ಪ್ರಕಾಶನದ ಮೂಲಕ ಸಾಕಷ್ಟು ಮೌಲ್ಯಯುತ ಪುಸ್ತಕಗಳನ್ನು ಕೊಟ್ಟಿರುವ ಕೆ ಅಕ್ಷತಾ ಎರಡು ವರ್ಷದ ಹಿಂದೆ ‘ಅವಧಿ’ಗೆ ಅಂಕಣ ಬರೆಯುತ್ತಿದ್ದರು. ದಣಪೆಯಾಚೆ..ಅಂತ.
ಆ ಸರಣಿಯ ‘ಪಲ್ಯ ಎಂಬ ಆತ್ಮವಿಶ್ವಾಸ‘ ಲೇಖನವನ್ನು ಮತ್ತೆ ಪ್ರಕಟಿಸಿದ್ದೆವು. ಆ ಲೇಖನ ಕೊಟ್ಟ ಆತ್ಮವಿಶ್ವಾಸದ ಬಗೆಗೂ ಅಕ್ಷತಾ ಇಲ್ಲಿ ಮನ ಬಿಚ್ಚಿ ಮಾತನಾಡಿದ್ದಾರೆ.
ಎರಡು ವರುಷದ ಹಿಂದೆ ನಾನು ಬರೆದ ಲೇಖನವನ್ನು ಅವಧಿಯಲ್ಲಿ ಮತ್ತೊಮ್ಮೆ ನೋಡಿ ನಂಗೆ ನಿಜ ಖುಷಿಯಾಯಿತು. ಪ್ರಕಟಿಸಿದ ಅವಧಿ ಬಳಗಕ್ಕೂ ಮತ್ತು ಓದಿ ಪ್ರತಿಕ್ರಿಯಿಸಿದ ಸಹೃದಯಿ ಓದುಗ ಮಿತ್ರರೆಲ್ಲರಿಗೂ ಥ್ಯಾಂಕ್ಸ್.
ಒಂದು ರೀತಿಯಲ್ಲಿ ಸ್ವಂತದ ಬರವಣಿಗೆಯನ್ನೇ ಮರೆತಿದ್ದವಳನ್ನು ಈ ಲೇಖನ ಮತ್ತೆ ನನ್ನಲ್ಲಿ ಕವಿತೆ , ಇತ್ಯಾದಿ ಬರವಣಿಗೆ ಮಾಡುವ ಆಶೆಯನ್ನು ಹುಟ್ಟಿಸಿದೆ . ಕಿ.ರಂ , ಅನಂತಮೂರ್ತಿ, ಶಾಮಣ್ಣ ಮತ್ತಿತರ ಮಾತು ಗಳನ್ನು ಬರಹಕ್ಕೆ ಇಳಿಸುವುದನ್ನೆ ಮತ್ತೆ ಮತ್ತೆ ಅಭ್ಯಾಸ ಮಾಡುತ್ತಾ ಮತ್ತು ಅದರಲ್ಲಿ ಅಗಾಧವಾದ ಸುಖವನ್ನು ಕಾಣುತಿದ್ದ ನನಗೆ ಸ್ವಂತದ ಬರವಣಿಗೆ ಮರೆತೇ ಹೋದಹಾಗೆ ಆಗಿತ್ತು ಅಂದ್ರು ಸುಳ್ಳಲ್ಲ .
ನಿಜ ಅಂದ್ರೆ ಇತ್ತೀಚಿನ ದಿನದಲ್ಲಿ ನಾನು ಏನು ಬರೆದು ಇಲ್ಲ . ಗೆಳೆಯರ ಕೈಲಿ ಈ ಬಗ್ಗೆ ಬಯ್ಯಿಸಿಕೊಳ್ಳುವುದು ಅಭ್ಯಾಸ ಆಗಿತ್ತು . ಪ್ರಕಾಶನದ ದಸೆಯಿಂದ ನಾನು ಸ್ವಂತದ ಬರವಣಿಗೆ ಮಾಡಲು ಸಾಧ್ಯವಾಗುತ್ತಿಲ್ಲ ಎಂಬುದು ನನ್ನ ಗೆಳೆಯರ ಅಭಿಪ್ರಾಯ ಆದರೆ ನಿಜವೆಂದರೆ ಅದಲ್ಲ ಕಾರಣ . ಬೇರೆಯೇ ಇದೆ. ಏನೆಂದರೆ ಬೇರೆಯವರ ಮಾತುಗಳನ್ನು ಬರಹಕ್ಕೆ ತರುವುದೆಂದರೆ ಆಲಿಸುವುದು ಮತ್ತು ಅದನ್ನು ಯಥಾವತ್ತಾಗಿ ಬರೆಯುವುದಲ್ಲ ನನ್ನ ಪಾಲಿಗೆ . ಆ ಮಾತಿನ ಒಳಗಿನ ದ್ವನಿಯನ್ನು ಗ್ರಹಿಸಬೇಕು . ಅದನ್ನು ಅಭ್ಯಾಸ ಮಾಡುತ್ತಲೇ ಇದ್ದೇನೆ .
ಅದರ ನಡುವೆ ಸ್ವಂತದ ಬರವಣಿಗೆಯನ್ನು ಮರೆತೇ ಬಿಟ್ಟಿದ್ದ ನನ್ನೆದುರಿಗೆ ನನ್ನ ಬರವಣಿಗೆಯನ್ನು ಹಿಡಿದು ಮತ್ತೆ ಬರೆಯುವ ಆಶೆಯನ್ನು ಉಕ್ಕಿಸಿದ್ದೀರಿ,ನಿಮಗೆ ಎಷ್ಟು ಥ್ಯಾಂಕ್ಸ್ ಹೇಳಿದರೂ ಕಮ್ಮಿ . ಯಾಕೆಂದರೆ ನನಗೀಗ ಇಂಥದೊಂದು ಸಾಕ್ಷಾತ್ಕಾರದ , ಮೆಚ್ಚಗೆಯ, ಸ್ಪಂದನೆಯ ಅಗತ್ಯವಿತ್ತು . ಬರವಣಿಗೆಯ ಮನಸ್ಸೇ ವಿಚಿತ್ರ ಅನಿಸ್ತದೆ.ಯಾರು ಕೇಳಲಿ ಬಿಡಲಿ ನಾನು ನನಗಾಗಿ ಹಾಡುವೆ ಅಂತ ಗಟ್ಟಿ ಮಾಡಿಕೊಂಡೆ ಬರವಣಿಗೆ ಮಾಡ್ತೀವಿ. ಆದರೆ ಕೇಳೋ ಹಾಗೆ ಹಾಡಬೇಕು ಅನ್ನೋ ಪ್ರಜ್ಞೆ ಇರೋ ಹಾಗೆ ಓದೋ ಹಾಗೆ ಬರೀಬೇಕು ಅನ್ನೋ ಆಶೆಯೂ ಸುಪ್ತವಾಗಿ ಇದ್ದೆ ಇರ್ತದೆ.
ಹಾಗೆ ತುಂಬಾ ಸರ್ತಿ ಬರವಣಿಗೆ ಮಾಡಿದ ಮೇಲೆ ಅದು ನನ್ನದಲ್ಲ ಓದುಗನದು.ಹೊಗಳಲಿ ಬಯ್ಯಲಿ ಏನಾದ್ರು ಮಾಡ್ಕೊಳಿ ಅಥವಾ ಪ್ರತಿಕ್ರಿಯಿಸದೇನೆ ಇರೋದು ಅವರ ಹಕ್ಕು ಅಂದುಕೊಳ್ಳುವವಳು ನಾನು. ಆದರೆ ಈ ಹೊತ್ತು ಇದನ್ನ ನೋಡಿ ಖುಷಿ ಆಗಲಿಲ್ಲ ಅಂದ್ರೆ ಸುಳ್ಲಾಗ್ತದೆ. ಮತ್ತೆ ಬರೆಯೋ ಆಶೆ ಹುಟ್ಟಲೇ ಇಲ್ಲ ಅಂದ್ರೆ ಸುಳ್ಲಾಗ್ತದೆ
]]>
Like this:
Like Loading...
Related
bereyavara maatannu aksharakke ilisuvaaga maatinolagina dhvaniynnu grahisabeku annuva nimma maatu aksharshaha satya akshata.
anupama prasad.