ಅಕ್ಷಯ ಪಂಡಿತ್ ಗೆ ‘ಈ ಹೊತ್ತಿಗೆ’ ಕಥಾ ಪ್ರಶಸ್ತಿ

ಈ ಹೊತ್ತಿಗೆ ಕಥಾ ಸ್ಪರ್ಧೆಗಳ ಫಲಿತಾಂಶವನ್ನು ಘೋಷಿಸಲಾಗಿದ್ದು ಸಾಗರದವರಾದ ಅಕ್ಷಯ ಪಂಡಿತ್ ಅವರ ಅಪ್ರಕಟಿತ ಕಥಾಸಂಕಲನ, ‘ಬಯಲಲಿ ತೇಲುತ ತಾನು’, ೨೦೨೧ರ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಯನ್ನು ಪಡೆದುಕೊಂಡಿದೆ. ಪ್ರಶಸ್ತಿಯು ೧೦ ಸಾವಿರ ನಗದು ಹಾಗು ಪ್ರಶಸ್ತಿ ಫಲಕವನ್ನೊಳಗೊಂಡಿದೆ.

ಅಕ್ಷಯ ಪಂಡಿತ್ ಪ್ರಸ್ತುತ ಬೆಂಗಳೂರಿನ ‘ನಾಸ್ಡ್ಯಾಕ್ (Nasdaq) ಸಾಫ್ಟ್ವೇರ್ ಕಂಪನಿಯಲ್ಲಿ ಪ್ರಾಡಕ್ಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ವಿಮರ್ಶಕ ಡಾ. ಓ.ಎಲ್ ನಾಗಭೂಷಣಸ್ವಾಮಿ ಅವರು ಈ ಬಾರಿಯ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ವಿಭಾಗದ ತೀರ್ಪುಗಾರರಾಗಿದ್ದರು.

ಇದೇ ಸಮಯದಲ್ಲಿ ೨೬ರ ವಯೋಮಿತಿಯ ಕಥೆಗಾರರಿಗಾಗಿ ಈ ಹೊತ್ತಿಗೆಯು ಆಯೋಜಿಸಿದ್ದ ಕಥಾ ಸ್ಪರ್ಧೆಯಲ್ಲಿ, ಈ ಬಾರಿ ಬಹುಮಾನಕ್ಕೆ ಯೋಗ್ಯವಾದ ಕಥೆಗಳು ಬಂದಿಲ್ಲದ ಕಾರಣ ಯಾವ ಕಥೆಗೂ ಬಹುಮಾನ ಕೊಡುತ್ತಿಲ್ಲ. ಪರ್ಯಾಯವಾಗಿ ‘ಈ ಹೊತ್ತಿಗೆ’ಯು ಮುಂದಿನ ದಿನಗಳಲ್ಲಿ ೨ ದಿನಗಳ ಆನ್ ಲೈನ್ ಕಥಾ ಕಮ್ಮಟವನ್ನೇರ್ಪಡಿಸಲಿದ್ದು, ಈ ವರ್ಷ ಸ್ಪರ್ಧೆಯಲ್ಲಿ ಭಾಗವಹಿಸಿದ ಕಥೆಗಾರರಿಗೆ ಉಚಿತ ಪ್ರವೇಶವನ್ನು ನೀಡುವ ಮೂಲಕ ಅವರೊಳಗಿನ ಕಥೆಗಾರರಿಗೆ ಸರಿಯಾದ ಮಾರ್ಗದರ್ಶನ ದೊರೆಯುವಂತೆ ಮಾಡಿ ಅವರುಗಳನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ.

ಸೃಜನಶೀಲ ಸಾಹಿತಿ ಚಿದಂಬರ ನರೇಂದ್ರ ಅವರು ಈ ವಿಭಾಗದ ತೀರ್ಪುಗಾರರಾಗಿದ್ದರು.

ಇದೇ ಮೇ ೧ರಂದು, ಬೆಂಗಳೂರಿನ ಜೆಪಿ ನಗರದಲ್ಲಿರುವ ಕಪ್ಪಣ್ಣ ಅಂಗಳದಲ್ಲಿ ನಡೆಯಲಿರುವ, ಈ ಹೊತ್ತಿಗೆಯ ಹೊನಲು ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

‍ಲೇಖಕರು Avadhi

March 24, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: