ಕುಶ್ವಂತ್ ಕೋಳಿಬೈಲು
೧.
ಗಾಜನೂರಿನ
ಗಾಜು ಒಡೆದುಹೋಯಿತು..
ಕನ್ನಡಿಗರ ಮನಸ್ಸೂ
ಚೂರುಚೂರಾಯಿತು !!!
೨.
ಅಪ್ಪನಂತೆ ಹಾಡುತ್ತಿದ್ದ..
ಅಪ್ಪನಂತೆ ನಟಿಸುತ್ತಿದ್ದ..
ಅಪ್ಪನಂತೆ ಹೊರಟುಹೋದ !!!
೩.
ಹೃದಯಾಘಾತ
ಇಡೀ ನಾಡಿಗೆ ಆಗಿದೆ..
ಎದೆನೋವು ಬಂದದ್ದು
ಅವನಿಗೆ ಮಾತ್ರ!
೪.
ಕನ್ನಡ ರಾಜ್ಯೋತ್ಸವಕ್ಕೆ
ಅಣ್ಣಾ ಬಾಂಡಿಲ್ಲ !!
ಬೊಂಬೆ ಹಾಡುತೈತೆ
ಅರಮನೆಯಲ್ಲಿ ರಾಜಕುಮಾರನಿಲ್ಲ !!!
೫.
ಲೋಕದ ಹಣೆಬರಹವಿಷ್ಟೆ,
ಪಾಪಿಗಳು ಬೇಗ ಸಾಯುವುದಿಲ್ಲ…
ಅಜಾತಶತ್ರುಗಳಿಗೆ ದೇವರು
ಆಯುಷ್ಯ ಕೊಡುವುದಿಲ್ಲ !!!
೬.
ಇದೊಂದು ಸೀನನ್ನು
ಕಟ್ ಮಾಡಿಬಿಡಿ..
ಅಪ್ಪು ರೀಟೇಕ್ ಮಾಡುತ್ತಾರೆ
ಒಮ್ಮೆ ಯ್ಯಾಕ್ಷನ್ ಅಂದುಬಿಡಿ !!!
೭.
ಇನ್ನೂ ಇಂಟರ್ವಲ್ಲೇ
ಆದಂತ್ತಿಲ್ಲ…
ಹಾಡು ಮುಗಿಯುವ ಮೊದಲೇ
ಕುಣಿತ ನಿಲ್ಲಿಸಿದೆಯಲ್ಲ?!!
0 ಪ್ರತಿಕ್ರಿಯೆಗಳು