ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಅಮ್ಮಮ್ಮ ತಕ್ಷಣ ಬಂದು ಮಾತನಾಡಿಸುತ್ತಾಳೆ..

kolam-patterns-b9

ದುಂಡಾದ ಅಕ್ಷರಗಳಿಗೆ ಐದು ಅಂಕ ಅಂತ ಪ್ರಶ್ನೆ ಪತ್ರಿಕೆಯಲ್ಲಿ ಇರುತ್ತಿದ್ದುದು ನೆನಪಿದೆಯೆ? ಸುದ್ದಿ ಪತ್ರಿಕೆಗೂ ಅದು ಅನ್ವಯಿಸುತ್ತೆ. ಅದೇ ಸುದ್ದಿ, ಅದೇ ವಿವರ, ಅದೇ ಫೋಟೊ ಇರುವ ಎರಡು ಪತ್ರಿಕೆಗಳನ್ನು ಓದುಗ ಅವುಗಳ ನೋಟದಿಂದ ಅಳೆಯುತ್ತಾನೆ. ಆಹಾ ಎಂಥ ಚಂದದ ವಿನ್ಯಾಸ ಅಂತ ಅವನು ಹೇಳದಿದ್ದಾಗಲೂ ಒಳ್ಳೆಯ ವಿನ್ಯಾಸ ತನ್ನ ಪರಿಣಾಮವನ್ನು ಸದ್ದಿಲ್ಲದೆ ಮಾಡಿಯೇ ಇರುತ್ತದೆ.

ಯಾಕೆಂದರೆ ಪುಟವಿನ್ಯಾಸ ಬರಿಯ ಸೌಂದರ್ಯಪ್ರಜ್ಞೆಗೆ ಸಂಬಂಧಿಸಿದ್ದಲ್ಲ. ಸುದ್ದಿಯನ್ನು ಸಲೀಸಾಗಿ ಅರ್ಥ ಮಾಡಿಕೊಳ್ಳಲು ನೆರವಾಗುವುದು ಅದರ ಮುಖ್ಯ ಪಾತ್ರ. ಹಾಗಾಗಿ ಜನಸಾಮಾನ್ಯರಿಗೆ ವಿನ್ಯಾಸವೆಲ್ಲ ಎಲ್ಲಿ ಅರ್ಥವಾಗುತ್ತೆ ಹೇಳಿ, ಅವರಿಗೆ ಸುದ್ದಿ ಮಾತ್ರ ಮುಖ್ಯ ಅಷ್ಟೆ ಎಂದು ವಾದಿಸುವವರು ಮತ್ತೊಮ್ಮೆ ಯೋಚಿಸಬೇಕು.

ಸಂಪೂರ್ಣ ಓದಿಗೆ ಭೇಟಿ ಕೊಡಿ: ಅಪಾರ

+++

2022314103_7858ea5a93

ಕಾಯಿಲೆ-ಕಸಾಲೆ ಎಂದು ಆಸ್ಪತ್ರೆಗಳಿಗೆ ಅಲೆದಾಡದೆ, ಹಾಸಿಗೆ ಹಿಡಿಯದೆ, ಚೆಂದಾಗಿ ತಿರುಗಾಡಿಕೊಂಡಿದ್ದ, ಇಂದಿದ್ದು ನಾಳೆ ಇಲ್ಲ ಎಂದು ನಂಬಲಸಾಧ್ಯವಾದ ರೀತಿಯಲ್ಲಿ ತೀರಿಕೊಂಡ ಅಮ್ಮಮ್ಮ ಬದುಕಿನ ಅನೇಕ ಕ್ಷಣಗಳಲ್ಲಿ ನೆನಪಾಗುತ್ತಲೇ ಇರುತ್ತಾಳೆ. ಈಗಲೂ, ಅಂಗಳದ ಮೆಟ್ಟಿಲಮೇಲೆ ಬಿಸಿಲು ಕಾಯಿಸುತ್ತಾ, ಸೂಜಿಮೆಣಸಿನಕಾಯಿ ಒಣಗಿಸುತ್ತಾ ಕುಳಿತ ಅಮ್ಮಮ್ಮನ ಚಿತ್ರ ಕಣ್ಣಮುಂದೆ ; ಬೆಂಗಳೂರಿನಿಂದ ಮನೆಗೆ ಹೋದಾಗಲೆಲ್ಲಾ ಪಕ್ಕದ ಮನೆಯ ಅಜ್ಜಿಯ ಜೊತೆ ಹರಟುತ್ತಿದ್ದ ಅಮ್ಮಮ್ಮ ತಕ್ಷಣ ಬಂದು ಮಾತನಾಡಿಸುತ್ತಾಳೆ ಎಂದೇ ನಿರೀಕ್ಷೆ . .

ಸಂಪೂರ್ಣ ಓದಿಗೆ ಭೇಟಿ ಕೊಡಿ:  ಗ್ರೀಷ್ಮ ಗಾನ

+++

hampi-pravin-final

ವಸುಧೇಂದ್ರರದು ಮೂಲಭೂತವಾಗಿ ಅನುಕಂಪದ ಮನಸ್ಸು.
ಇವರನ್ನು ‘ಹೆಂಗರುಳಿನ ಲೇಖಕ’ ಎಂದು ಬಣ್ಣಿಸಿದರೆ ತಪ್ಪಾಗಲಿಕ್ಕಿಲ್ಲ.
ವಸುಧೇಂದ್ರರ ಕೃತಿಗಳನ್ನು ಓದಿದವರಿಗೆ ಥಟ್ಟನೆ ಕಾಣುವ ಮಾತೆಂದರೆ ಅಸಹಾಯಕರಿಗಾಗಿ ಮಿಡಿಯುವ ಇವರ ಮನಸ್ಸು.
ಸಂಡೂರೇ ಆಗಲಿ, ಬೆಂಗಳೂರೇ ಆಗಲಿ, ಗಂಡೇ ಆಗಲಿ, ಹೆಣ್ಣೇ ಆಗಲಿ ಅಥವಾ ಅರೆಗಂಡೇ ಆಗಲಿ, ವಸುಧೇಂದ್ರರು ಎಲ್ಲರನ್ನೂ ಸಹಾನುಭೂತಿಯಿಂದಲೇ ನೋಡುತ್ತಾರೆ.
ಮನುಷ್ಯರಷ್ಟೇ ಅಲ್ಲ, ಕೋತಿಗಳೂ ಸಹ ಇವರ ಸಹಾನುಭೂತಿಗೆ ಪಾತ್ರವಾಗುತ್ತವೆ.

ಸಂಪೂರ್ಣ ಓದಿಗೆ ಭೇಟಿ ಕೊಡಿ: ಸಲ್ಲಾಪ

‍ಲೇಖಕರು avadhi

31 January, 2009

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading