ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

'ಅರಿಕೆ '…

-ಸುಶ್ರುತ ದೊಡ್ಡೇರಿ

ಮೌನಗಾಳ ಸಂಜೆಮಳೆಯ ದಿನಗಳಿವು.. ಕೊಚ್ಚಿ ಹೋಗುತ್ತಿರುವ ಚಿಂದಿ ಕನಸುಗಳನ್ನೆಲ್ಲ ಆಯ್ದು ಒಂದು ಮಾಡಿ ತಿದ್ದಿ ತೀಡಿ ಒಪ್ಪ ಮಾಡುತ್ತಿರುವೆ, ನೀನು ಅಡ್ಡ ಬರಬೇಡ.. ಯಾವುದೋ ಮರದ ಕರಿಯೆಲೆ ತೆಗೆದು ಹುಬ್ಬಿಗಿಟ್ಟಿದ್ದೇನೆ ಯಾವುದೋ ಹೂವಿನ ಪಕಳೆ ಹಿಡಿದು ತುಟಿಗಿಟ್ಟಿದ್ದೇನೆ ಹರಿದ ಸರದ ಮುತ್ತುಗಳು ಇಲ್ಲಿ ಒಡವೆಯಾಗಿವೆ ಮುರಿದ ಮಂಟಪ ಕಂಬಗಳು ಕಾಲಾಗಿವೆ ಸಂಪಿಗೆ ಸಿಗದ್ದಕ್ಕೆ ಬೋರೆಹಣ್ಣು ಇಡಲಿದ್ದೇನೆ ಮೂಗಿಗೆ- ಈಗ ನೀನು ಅಡ್ಡ ಬರಬೇಡ.. ನಿನ್ನೊನಪು ಒಯ್ಯಾರ ಈಕೆಗಿಲ್ಲ, ಹಾಗಂತ ನಾನು ವಿಚಲಿತನಾಗಿಲ್ಲ.. ಇವಳು ಹಲವು ಕನಸುಗಳಿಂದೊಡೆದ ಚೂರುಗಳ ಒಟ್ಟುರೂಪ ನೂರು ನಿರ್ನಿದ್ರೆ ರಾತ್ರಿಗಳ ನಿಟ್ಟುಸಿರ ಶಾಪ ಹೊಸಪ್ರೀತಿಯಿಂದಲೇ ತುಂಬಬೇಕಿದೆ ಜೀವಭಾವ ಹಾರೈಸಲಣಿಯಾಗು ಅಥವಾ ದಾರಿಬಿಟ್ಟು ನಿಲ್ಲು.. ತೀಡುಗಾಳಿಗೆ ಕಾರುಮೋಡಗಳು ತೇಲಿಹೋಗಲಿ ಮಿಂಚ ಹೊಳಪಲಿ ಗುಡುಗಿನಬ್ಬರ ಕ್ಷೀಣವಾಗಲಿ ಮತ್ತೆ ಹೊಮ್ಮಿ ಅರಳಲಿ ಚಿಕ್ಕೆ ಹೂದೋಟ ನನ್ನ ಕಿನ್ನರಿಗಾಗಲಿ ಚಂದ್ರಿಕೆಯ ಪ್ರಭಾತ.]]>

‍ಲೇಖಕರು avadhi

17 October, 2010

2 Comments

  1. savitri

    Shushrutanna Poem is very nice.

  2. jahnavi butty

    channagide

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading