**
ಲೇಖಕ, ಪ್ರಕಾಶಕ ಹಾಗೂ ಸಂಘಟಕರಾಗಿರುವ ಅವಿರತ ಹರೀಶ್ ಅವರಿಗೆ 60 ವರ್ಷ ತುಂಬಿದ ಸಂಭ್ರಮ.
ಈ ಸಂಭ್ರಮ ಹೆಚ್ಚಿಸಲು ಅವರ ಗೆಳೆಯರ ಬಳಗ ‘ಅವಿರತ ಹರೀಶ್ 60 ರ ಸಾಂಸ್ಕೃತಿಕ ಸಂಭ್ರಮ’ ಕಾರ್ಯಕ್ರಮವನ್ನು ಆಯೋಜಿಸಿತು.
ಹೆಸರಾಂತ ಸಾಹಿತಿ ನಾಡೋಜ ಬರಗೂರು ರಾಮಚಂದ್ರಪ್ಪ ಅವರು ಈ ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದರು.
ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರನ್ನು ಖಾಯಂಗೊಳಿಸಿ ಅವರ ಜೀವನಕ್ಕೆ ಭದ್ರತೆ ನೀಡಬೇಕೆಂದು ಅವರು ಆಗ್ರಹಿಸಿದರು.
ಹಿರಿಯ ಪತ್ರಕರ್ತ ಜಿ ಎನ್ ಮೋಹನ್ ಅವರು ಅಭಿನಂದನಾ ನುಡಿಗಳನ್ನಾಡಿದರು.
ಈ ಸಂದರ್ಭದಲ್ಲಿ ಸಾಹಿತಿ ಡಾ ರಾಜಶೇಖರ್ ಮಠಪತಿ, ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಟಿ ಎಸ್ ದಕ್ಷಿಣಾಮೂರ್ತಿ, ಈಗಿನ ಜಂಟಿ ನಿರ್ದೇಶಕರಾದ ವಿ ಎನ್ ಮಲ್ಲಿಕಾರ್ಜುನಸ್ವಾಮಿ, ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್, ‘ಅವಿರತ ಹರೀಶ್ ಗೆಳೆಯರ ಬಳಗ’ದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದ ಫೋಟೋ ಆಲ್ಬಂ ಇಲ್ಲಿದೆ.
**
0 ಪ್ರತಿಕ್ರಿಯೆಗಳು