ಅಶ್ಫಾಕ್ ಪೀರಜಾದೆ ಗಜಲ್

ಬೇಲಿಯೇ ಹೊಲಕೆ ಕೊಳ್ಳಿ ಇಟ್ಟಿದೆ ಏನು ಮಾಡಲಿ

ಅಶ್ಫಾಕ್ ಪೀರಜಾದೆ

ಈ ವ್ಯವಸ್ಥೆ ನನ್ನ ಕಣ್ಣು ಕಟ್ಟಿದೆ ಏನು ಮಾಡಲಿ
ಆ ಆವಸ್ಥೆ ನನ್ನ ನಾಲಿಗೆ ಸುಟ್ಟಿದೆ ಏನು ಮಾಡಲಿ

ಲೆಕ್ಕಣಿಕೆಗೆ ಕ್ರಾಂತಿಯ ಭಾಷೆ ಕಲಿಸಬೇಕಾದ ತುರ್ತು
ನೆತ್ತರು ಶಾಯಿಯಾಗಿ ಹೆಪ್ಪುಗಟ್ಟಿದೆ ಏನು ಮಾಡಲಿ

ಶಾಂತಿಯ ತೋಟದಲಿ ಸಾವಿನಾ ಆರ್ಭಟ ನೋಡು
ಆಕ್ರಂದನ ಮುಗಿಲು ಮುಟ್ಟಿದೆ ಏನು ಮಾಡಲಿ

ದೇಶ ಸುಡುವಾಗ ಪಿಟೀಲು ನುಡಿಸಿದ ರೋಮ್ ದೊರೆ
ಬಡಪ್ರಜೆಗಳ ಕಣ್ಣೀರು ಶಾಪ ತಟ್ಟಿದೆ ಏನು ಮಾಡಲಿ

ಸಾವಿನ ಸಂತೆಯಲಿ ಸೌದಾಗರರದೆ ಅಧಿಪತ್ಯ
ಮಿಥ್ಯ ಮಾನವೀಯತೆ ಮೆಟ್ಟಿದೆ ಏನು ಮಾಡಲಿ

ಅನ್ನ ಹಾಕುವ ಪ್ರಭುಗೆ ಋಣಿಯಾಗಿರಬೇಕು `ಪೀರ್‌ʻ
ಬೇಲಿಯೇ ಹೊಲಕೆ ಕೊಳ್ಳಿ ಇಟ್ಟಿದೆ ಏನು ಮಾಡಲಿ.

‍ಲೇಖಕರು Avadhi

October 8, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

2 ಪ್ರತಿಕ್ರಿಯೆಗಳು

  1. Ashfaq Peerzade

    ಗಜಲ್ ಪ್ರಕಟಿಸಿದ “ಅವಧಿ” ಬಳಗಕ್ಕೆ ತುಂಬ ಹೃದಯದ ಧನ್ಯವಾದಗಳು.

    ಪ್ರತಿಕ್ರಿಯೆ
  2. ಅಶ್ಫಾಕ್ ಪೀರಜಾದೆ

    ಗಜಲ್ ಪ್ರಕಟಿಸಿ ಪ್ರೀತಿ ತೋರಿದ ಅವಧಿ ಬಳಗಕ್ಕೆ ಧನ್ಯವಾದಗಳು.

    ಪ್ರತಿಕ್ರಿಯೆ

ಇದಕ್ಕೆ ಪ್ರತಿಕ್ರಿಯೆ ನೀಡಿ Ashfaq PeerzadeCancel reply

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: