ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಇದು ಅವಧಿ-ಆಲೆಮನೆ, ಹಾಗಾಗಿ ‘ನುಡಿನಮನ’

ಗದಗದ ಸಾಹಿತ್ಯ ಸಮ್ಮೇಳನದ ಯಶಸ್ವಿ ಪಯಣದ ನಂತರ ಮತ್ತೆ ‘ಅ’ ಮತ್ತು ‘ಆ’ ಜೊತೆಗೂಡಿ ಸನ್ನದ್ಧವಾಗಿದೆ. ಕನ್ನಡದ ಈ ಮೊದಲ್ನುಡಿ, ತೊದಲ್ನುಡಿ ಇಲ್ಲದೆ ಮಾತು ಇಲ್ಲವಲ್ಲ.. ಹಾಗಾಗಿ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಒಂದು ಮೊದಲ ನುಡಿ ಬರೆಯಲು ಈ ಅಕ್ಷರಗಳು ಸಜ್ಜಾಗಿವೆ.

ಅವಧಿ ಮತ್ತು ಆಲೆಮನೆ ಎರಡೂ ಜೋಡಿಯಾದ ಪರಿಣಾಮವೇ ‘ನುಡಿ ನಮನ’.

ಎಲೆಕ್ಟ್ರಾನಿಕ್ ಮೀಡಿಯಾ ವಿದ್ಯಾರ್ಥಿಗಳು ಹಾಗೂ ಸಿನೆಮೆಟೋಗ್ರಫಿ  ಕಲಿಯುತ್ತಿರುವ ಉತ್ಸಾಹಿಗಳು ದಂಡು ಕಟ್ಟಿಕೊಂಡು ಅದನ್ನು ‘ಇರುವೆ ಬಳಗ’ ಎಂದು ಬಣ್ಣಿ ಸಿಕೊಂಡಿದೆ. ಹೊಸ ದಿಕ್ಕಿನತ್ತ ಕೈಚಾಚುವ ಉತ್ಸಾಹ ಇರುವ ಈ ದಂಡಿಗೆ ಶುಭ ಹಾರೈಸುತ್ತಾ ಅವಧಿ ‘ಆಲ್ ದಿ ಬೆಸ್ಟ್’ ಹೇಳುತ್ತಿದ್ದೇವೆ.

77ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಕ್ಷಿಯಾಗುತ್ತಿರುವ ಬೆಂಗಳೂರನ್ನು ಆಲೆಮನೆಯ ಇರುವೆಗಳು ಸುತ್ತು ವರಿದು ಕ್ಷಣ-ಕ್ಷಣದ ಮಾಹಿತಿಯನ್ನು ಹೊತ್ತು ತರಲಿವೆ

‘ಆಲೆಮನೆ’ ಬಳಗ ಎಂದರೇನು??

ಹಗಲಿರುಳು ದುಡಿಯೋ ಮನಸ್ಸು ಮಾಡಿರುವ ಬಲಿಷ್ಠ ಯುವ ಇರುವೆಗಳ ಗುಂಪಿದು. ಸಿಕ್ಕಿದ್ದೆಲ್ಲವನೂ ಓದೋ ಹವ್ಯಾಸ, ಬರದಿದ್ದರೂ ತೋಚಿದ್ದೆಲ್ಲವನೂ ಬರೆಯೋ ಚಟ, ನಾಟಕದ ಹುಚ್ಚು, ಸಿನಿಮಾದೆಡಗೆ ಒಂದು ಬೆರಗುಗಣ್ಣು, ಕಲಾತ್ಮಕತೆಯ ಗೀಳು, ಛಾಯಾಗ್ರಹಣದ ಚತುರತೆಗಳನ್ನು ತನ್ನೊಡಲಲ್ಲಿ ಅವಿತಿಟ್ಟುಕೊಂಡಿರುವ ಆಲೆಮನೆಯು ಕನ್ನಡ ನಾಡಿನ ಸಾಂಸ್ಕೃತಿಕ ಜಗತ್ತಿನ ಬೆಲ್ಲದ ಸವಿಯನ್ನು ಸಾಗರದಾಚೆಗೂ ಸಿಂಪಡಿಸುವ ಹಂಬಲದಿಂದ ಚಿಗುರೊಡೆದು, ಇಡೀ ಪ್ರಪಂಚದ ಕನ್ನಡಿಗರೆದೆಯ ಕದ ತಟ್ಟಲು ಸನ್ನದ್ಧವಾಗಿದೆ.

ನಮ್ಮ ಈ ಯುವಕರ ಗುಂಪು ಅಭಿವ್ಯಕ್ತಿಗಾಗಿ ಆರಿಸಿಕೊಂಡದ್ದು ಆಧುನಿಕ ನೆಟ್ಲೋಕದ ವೇದಿಕೆಯನ್ನು. ಪ್ರಸ್ತುತ ನಮ್ಮ ಬಳಗದ ಮೊದಲ ಕೊಡುಗೆ `ನುಡಿನಮನ’ ತಮ್ಮ ಮಡಿಲಲ್ಲಿದೆ. ಈ `ಸಂವೇದನಾಶೀಲ’ ಇರುವೆಗಳ ಗುಂಪು ಇನ್ನೂ ಅನೇಕ `ತಲೆಕೆಟ್ಟ’ ಸಾಹಸಗಳಿಗೆ ಕೈ ಹಾಕಲಿದೆಯೆಂಬ ಆಶ್ವಾಸನೆ ನಮ್ಮ ಕಡೆಯಿಂದ.

http://aalemanebalaga.blogspot.com

‍ಲೇಖಕರು avadhi

3 February, 2011

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

1 Comment

  1. ಗವಿಸಿದ್ಧ ಹೊಸಮನಿ, ಹುಬ್ಬಳ್ಳಿ

    ಇರುವೆ ಬಳಗದ ಕಾರ್ಯ ಯಶಶ್ವಿಯಾಗಲಿ..

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading