ಇನ್ನಿಲ್ಲವಾದಾಗ…

ರೇವಣಸಿದ್ದಪ್ಪ ಜಿ ಆರ್

ಇಂದು,ನಾಳೆ,
ಇಲ್ಲಾ ನಾಳಿದ್ದು,
ಈ ಕ್ಷಣ,ಮರುಕ್ಷಣ,
ಅಥವಾ
ಆ ಒಂದು ಕ್ಷಣ
ನಾನು ಇಲ್ಲವಾದಾಗ
ಎಲ್ಲಾ ಇರುವಂತೆ
ಎಲ್ಲವೂ ಸಾಂಗವಾಗಿ
ಸಾಗುತ್ತವೆ.

ಲೋಕದ ಮೋಟಾರು
ಯಾರೊಬ್ಬರ ಉಸಿರು
ಹೋದಾಗಲೂ
ಪಂಕ್ಚರ್ ಆಗುವುದಿಲ್ಲ;
ಯಾರೊಬ್ಬರ ಕಣ್ಣೀರಿಗೂ
ಪ್ರವಾಹವಾಗುವ ಶಕ್ತಿಯಿಲ್ಲ;
ಯಾರೊಬ್ಬರ ನಿಟ್ಟುಸಿರು
ಬಿರುಗಾಳಿ ಎಬ್ಬಿಸುವುದಿಲ್ಲ;
ಯಾರೊಬ್ಬರ ಹೃದಯ
ಛಿದ್ರವಾಗಿ
ಭೂಕಂಪನವಾಗುವುದಿಲ್ಲ.

ಗತಿಸಿದವರಿಗೆ
ಬದುಕಿದವರು
ಸಾಥ್ ಕೊಡುವಂತಿದ್ದರೆ
ಪಂಚಭೂತಗಳೂ
ಗುದ್ದು ಸೇರುತ್ತಿದ್ದವು.
ಎಷ್ಟಂತ ಹನಿಯ ಹನಿಸಿ
ಕಣ್ಣ ಕಡಾಯಿಯ
ಬತ್ತಿಸಿಕೊಳ್ಳುವೆ?
ಎದೆ ನಗಾರಿಯ
ಎನಿತು ಬಡಿದು
ರೋಧಿಸುವೇ?
ಎಷ್ಟು ಕಾಲ
ನಿನ್ನೊಳಗಿನ
ನನ್ನ ನೆನಪಿನ ಗಿಡಕ್ಕೆ
ನೀರೆರೆದು
ಹಸಿರಾಗಿಡುವೆ?
ಸತ್ತವರಿಗೆಲ್ಲಾ
ಸ್ಮಾರಕ ಕಟ್ಟಿಸುವಂತಿದ್ದರೆ
ಬದುಕುವವರಿಗೆ
ಜಾಗವೇ ಇರುತ್ತಿರಲಿಲ್ಲ.

ತನುತೊರೆದವನ
ಆಸೆ ನಿರಾಸೆ
ನೋವು ನಲಿವು
ದುಗುಡ ದುಮ್ಮಾನ
ಅವನೊಂದಿಗೇ
ಮಸಣ ಸೇರಿ
ಇರುವವರ
ಆಡಿಸುತ್ತವೆ
ಇನ್ನಿಲ್ಲದಂತೆ.
ಇದ್ದೂ ಇಲ್ಲದಂತೆ
ಇಲ್ಲದೆಯೂ ಇರುವಂತೆ
ಭಾಸವಾಗುವ
ಮಾಯಕ ಜಗದಿ
ಅಂತೆಯೇ
ಒಪ್ಪಿಕೊಂಡು
ಅಪ್ಪಿಕೊಂಡು
ಮುಪ್ಪುರಿಯಬೇಕು.

ಜ್ಯೋತಿರ್ವರ್ಷಗಳ ದೂರದಲ್ಲಿ
ಇರುವುದ
ಅರುಹುಹರಿಲ್ಲ;
ಜ್ಯೋತಿರ್ವರ್ಷಗಳು
ಉರುಳುರುಳಿ ಪೋಗಲು
ಏನಿರ್ಪುದೋ ಬಲ್ಲವರಿಲ್ಲ;
ಇಂದಿರುವುದೇನೋ ಒಂದು
ಆ ಒಂದರೊಳಗೊಂದಾಗಿ
ಬಾಳಬೇಕು ಎಂದೂ.

‍ಲೇಖಕರು Admin

February 20, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: