‘ಇಲ್ಲಿತ್ತು ಶೋಷಣೆ ಅಲ್ಲಿತ್ತು ದಾಸ್ಯ’

ಕಾಮಧೇನು

– ಶ್ರೀಧರ ನಾಯಕ


 
ಸುತ್ತಲೂ ಕವಿದಿರಲು
ಅಜ್ಞಾನದ ಕತ್ತಲು
ಎಂದೂ ಆರದ ಅರಿವಿನ
ದೀಪ ಹೊತ್ತಿಸಿದೆ ನೀನು!
ಸ್ವಾಭಿಮಾನದ ಬೆಳಕು
ದಮನಿತರಲ್ಲಿ ಮೂಡಿಸಿ
ಅವಕಾಶಗಳ ದಿಕ್ಕು ನೀ ತೋರಿದೆ.
ಅನ್ಯಾಯ-ಅವಮಾನಗಳ
ಕುಲುಮೆಯಲಿ ಬೆಂದು
ದುಃಖ-ದುಮ್ಮಾನಗಳ
ಸುತ್ತಿಗೆಯೇಟು ತಿಂದು
‘ಭೀಮ’ಕಾಯದ ಪುತ್ಥಳಿಯಾದೆ.
ಭಾಷೆ-ಗಡಿಗಳ ದಾಟಿ
ರಾಶಿ ಕೋಶಗಳನೋದಿ
ಜ್ಞಾನಶಿಖರದ ತುತ್ತತುದಿಯೇರಿ
ಹಾರಿಸಿದೆ ವಿಚಾರಕ್ರಾಂತಿಯಧ್ವಜವ.
‘ಇಲ್ಲಿತ್ತು ಶೋಷಣೆ ಅಲ್ಲಿತ್ತು ದಾಸ್ಯ’
ಮೊಳಗಿಸಿದೆ ನೀನು ಹೋರಾಟದ ಘೋಷಣೆ.
‘ಸ್ವಾತಂತ್ರ-ಸಮತೆ ಜೊತೆಗೂಡಬೇಕು
ಬಿಡುಗಡೆಯ ಕನಸು ನನಸಾಗಬೇಕು’
ದಲಿತನಾಯಕ ನೀನು ರಾಷ್ಟ್ರನಾಯಕನಾದೆ;
ಸಮತ್ವವ ಸಾರುವ ರಾಜ್ಯಾಂಗ ರೂಪಿಸಿದೆ.
ಆಧುನಿಕ ಮನುವೆಂದು
ಕರೆಯುವರು ನಿನ್ನ
ಆದರೆ ತರತಮವ ಸೃಷ್ಠಿಸಿದ
ಮನುವಲ್ಲ ನೀನು
ಸಮಾನತೆಯ ಅಮೃತ ಕರೆದ ಕಾಮಧೇನು!
 

‍ಲೇಖಕರು G

April 14, 2015

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

3 ಪ್ರತಿಕ್ರಿಯೆಗಳು

  1. ಹನುಮಂತ ಹಾಲಿಗೇರಿ

    ತುಂಬಾ ಚನ್ನಾಗಿದೆ ಸರ್. ಆದರೆ ಮನು ಹೆಸರು ಸೈತ ಬಾಬಾ ಕೂಡ ಬರಬಾರದಿತ್ತು ಅಂತ ಅನಿಸ್ತು.

    ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: