ಸ್ನೇಹಸ್ಪರ್ಶ: ಭಾನುವಾರ ಜುಲೈ 3, 2011ರಂದು ಬೆಳಿಗ್ಗೆ ಹತ್ತು ಗಂಟೆಗೆ ಬೆಂಗಳೂರು ಜಯನಗರದ ಎಚ್.ಎನ್.ಕಲಾಕ್ಷೇತ್ರದಲ್ಲಿ ಒಂದು ಅನೌಪಚಾರಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ.
ಇದು ಪರಾಗಸ್ಪರ್ಶ ಅಂಕಣದ ಓದುಗಬಳಗದ ಸ್ನೇಹಸಮಾವೇಶ. ಅಂಕಣಕಾರನೊಡನೆ ನೇರ ಮಾತುಕತೆಗೆ ಅವಕಾಶ. ಉದ್ದುದ್ದ ಭಾಷಣಗಳ ಕಾರ್ಯಕ್ರಮವಲ್ಲ. Informal friendly get-together ಮಾದರಿಯದು.
ಇದೇ ಸಂದರ್ಭದಲ್ಲಿ ಅಂಕಣದ ಇತ್ತೀಚಿನ ಬರಹಗಳ ಸಂಕಲನದ ಎರಡು ಪುಸ್ತಕಗಳು (‘ಗೆಲುವಿನ ಟಚ್’ ಮತ್ತು ‘ಚೆಲುವಿನ ಟಚ್’ – ಪ್ರಕಾಶಕರು: ಗೀತಾ ಬುಕ್ ಹೌಸ್, ಮೈಸೂರು) ಬಿಡುಗಡೆಯಾಗುತ್ತಿವೆ. ಖ್ಯಾತ ‘ಹನಿ’ಸಾಹಿತಿ ಎಚ್.ಡುಂಡಿರಾಜ್ ಮತ್ತು ಪತ್ರಕರ್ತ ನಾಗೇಶ ಹೆಗಡೆ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುತ್ತಾರೆ.
ಕಾರ್ಯಕ್ರಮದಲ್ಲಿ ಭಾಗವಹಿಸಲು ಆತ್ಮೀಯವಾಗಿ ಆಹ್ವಾನಿಸುತ್ತಿದ್ದೇನೆ. ಬನ್ನಿ.
– ಶ್ರೀವತ್ಸ ಜೋಶಿ
03 ಜುಲೈ · 09:30 – 12:30
ಸ್ಥಳ:
ಎಚ್ ಎನ್ ಕಲಾಕ್ಷೇತ್ರ, ಜಯನಗರ, ಬೆಂಗಳೂರು
National College Building, 36th Cross, 2nd Main, JayaNagar 7th Block
Bangalore, India







0 Comments