ಇಳೆಗೆ ಬಂದಿಳಿದ ಓ ಚೈತ್ರವೇ ಬಾ ಒಳಗೆ, ಬೇವಿನಲಿ ಒಂದಿಷ್ಟು ಬೆಲ್ಲ ಕಲಸು..

ಸು ರಂ ಎಕ್ಕುಂಡಿ
‘ಒಳಗೆ ಬಾ ಚೈತ್ರ!’
ಕವಿತೆಯ ಆಯ್ದ ಭಾಗ 
ಕರಗವನು ಹೊತ್ತಂತೆ ಹೊತ್ತಿದೆ ವಸಂತವಿದು
ಚಿಗುರಿನಾಸೆಯ ಜೀವ ಜಡಗಳಲ್ಲಿ
ರಸಯಾತ್ರೆ ಕೈಗೊಂಡು ದಣಿದಂಥ ದುಂಬಿಗಳು
ಕುಡಿದಿಹವು ಪುಷ್ಪರಸ ಕೊಡಗಳಲ್ಲಿ
ಪರಿಮಳದ ಪಲ್ಲಕ್ಕಿಯಲ್ಲಿ ಚೈತ್ರ ಬಂದಿರಲು
ಮನದ ಮಾಮರದಲ್ಲಿ ಸುರಿದ ಹೂವು
ನಾಗಸ್ವರವ ನುಡಿಸಿ ತಂಬೆಲರು ಸಾಗಿರಲು
ಇನ್ನೆಲ್ಲಿ ಉಳಿಯುವುದು ಹಳೆಯ ನೋವು
ಪಾಲ್ಗುಣದ ಉರಿಯಲ್ಲಿ ಕಹಿಕಷ್ಟಗಳು ಬೂದಿ
ಕಾಡಿನಲಿ ಕಣಿವೆಯಲಿ ಏನು ಹರ್ಷ
ವಸಂತವು ಕಾಲಿಡಲು ಹೂವುಗಳು ಹಾಡುಗಳು
ಕಾಯಲಿಲ್ಲವೇ ಇದಕೆ ಒಂದು ವರ್ಷ ?

ಇಳೆಗೆ ಬಂದಿಳಿದ ಓ ಚೈತ್ರವೇ  ಬಾ ಒಳಗೆ
ಬೇವಿನಲಿ ಒಂದಿಷ್ಟು ಬೆಲ್ಲ ಕಲಸು
ರೇಶಿಮೆಯ ರೆಕ್ಕೆಗಳ ಬಿಡಿಸಿದಾ ಪತಂಗವೇ
ಎಲ್ಲಿಹುದು ನಾವೆಲ್ಲಾ ಕಂಡ ಕನಸು
ಎಲೆಯ ಮರೆಯಲ್ಲಿ ಕುಹೂ ಕುಹೂ ನೀಲ ಬೆಟ್ಟಗಳು
ಹೂಬಿಸಿಲ ಕಾಸುತಿವೆ ಕಣಿವೆ ಹಾಡು
ಹುಲ್ಲಿನಲಿ ಬೆಟ್ಟದಲಿ ಹೊಸತನವ ನೀಡಿರುವ
ಚಿತ್ರವೇ ನಮಗಿಷ್ಟು ಸುಖವ ನೀಡು

‍ಲೇಖಕರು avadhi

March 25, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಆಣೆ

ಆಣೆ

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: