‘ಋತುಸೌರಭ’ಕ್ಕೆ ಸಂಭ್ರಮದ ಆರಂಭ

ವಿಜಯಲಕ್ಷ್ಮಿ ಸತ್ಯಮೂರ್ತಿ ಹಾಗೂ ಬಾಲಾಜಿ ರಾವ್ ಎನ್ ಅವರ ನೇತೃತ್ವದ ‘ಸೌರಭ ಫೌಂಡೇಷನ್’ ನ ಉದ್ಘಾಟನಾ ಕಾರ್ಯಕ್ರಮ ಬೆಂಗಳೂರಿನಲ್ಲಿ ಜರುಗಿತು.

ಶಾಸನ ತಜ್ಞೆ, ಭಾಷಾಂತರ ನಿರ್ದೇಶನಾಲಯದ ಉಪ ನಿರ್ದೇಶಕರಾದ ಡಾ ಸ್ಮಿತಾ ರೆಡ್ಡಿ ಅವರು ಉದ್ಘಾಟಿಸಿದರು. ಖ್ಯಾತ ಸಂಗೀತ ನಿರ್ದೇಶಕರಾದ ಡಾ ಜಯಶ್ರೀ ಅರವಿಂದ್ ಅವರು ಲಾಂಛನವನ್ನು ಬಿಡುಗಡೆ ಮಾಡಿದರು.

ಖ್ಯಾತ ಗಾಯಕರಾದ ಶಶಿಧರ ಕೋಟೆ ಅವರು ಶೀರ್ಷಿಕೆ ಗೀತೆ ಅನಾವರಣ ಮಾಡಿದರು, ಪತ್ರಕರ್ತ ಜಿ ಎನ್ ಮೋಹನ್ ಅವರು ವಿಜಯಲಕ್ಷ್ಮಿ ಸತ್ಯಮೂರ್ತಿ ಅವರ ಸಮಗ್ರ ಕವನ ಸಂಕಲನ ‘ಭ್ರಮರ ಬಂಧು’ ಕೃತಿಯನ್ನು ಬಿಡುಗಡೆ ಮಾಡಿದರು.

ಖ್ಯಾತ ಅಂಕಣ ಬರಹಗಾರರಾದ ಎಸ್ ಷಡಕ್ಷರಿ. ಹಿರಿಯ ಸಾಹಿತಿ ದೊಡ್ಡರಂಗೇಗೌಡ ಅವರು ಮುಖ್ಯ ಅತಿಥಿಗಳಾಗಿದ್ದರು. ರಂಗಾಯಣದ ವಿಶ್ರಾಂತ ನಿರ್ದೇಶಕರಾದ ಡಾ ಬಿ ವಿ ರಾಜಾರಾಂ ಅವರು ಅಧ್ಯಕ್ಷತೆ ವಹಿಸಿದ್ದರು.

ಪ್ರಣತಿ ಪ್ರಾರ್ಥನಾ ಗೀತೆ ಹಾಡಿದರು. ಹೇಮಶ್ರೀ ಗೀತಗಾಯನ ನಡೆಸಿಕೊಟ್ಟರು. ವಿಮಲಾ ಎಸ್ ಸ್ವಾಗತಿಸಿದರು, ಜಯಶ್ರೀ ರಾಜು ವಂದಿಸಿದರು. ಪ್ರವೀಣಾ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿದರು.

ಛಾಯಾಗ್ರಾಹಕ ವೆಂಕಟೇಶ ಮೂರ್ತಿ ಅವರು ಕಂಡಂತೆ ಕಾರ್ಯಕ್ರಮ ಹೀಗಿತ್ತು-

‍ಲೇಖಕರು avadhi

October 31, 2023

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: