ಎಚ್ ಎಸ್ ಸತ್ಯನಾರಾಯಣಗೆ ‘ಹಾಮಾನಾ ಪ್ರಶಸ್ತಿʼ

ಕನ್ನಡನಾಡು, ನುಡಿ, ಸಂಸ್ಕೃತಿಗಳನ್ನು ಕುರಿತ ಪುಸ್ತಕಕ್ಕೆ ಕನ್ನಡ ಗೆಳೆಯರ ಬಳಗವು ಕೊಡುಮಾಡುವ ೨೦೨೧ನೆ ಸಾಲಿನ ‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’ವನ್ನು ಘೋಷಿಸಲಾಗಿದೆ.

ವಿಮರ್ಶಕ ಡಾ. ಎಚ್.ಎಸ್. ಸತ್ಯನಾರಾಯಣ ಅವರ ಅಂಕಣ ಬರಹ ಸಂಕಲನ ‘ಅಪೂರ್ವ ಒಡನಾಟ’ ಪ್ರಶಸ್ತಿಗೆ ಪಾತ್ರವಾಗಿದ್ದು ರೂ ೩ ಸಾವಿರ ನಗದು, ಪ್ರಶಸ್ತಿ ಪತ್ರವನ್ನು ನೀಡಲಾಗುವುದು.

ಹಾಸನದ ಕಾಲೇಜು ಉಪನ್ಯಾಸಕಿ ಸುಮಾ ವೀಣಾ ಅವರ ‘ನಲಿವಿನ ನಾಲಗೆ’ ಪ್ರಬಂಧ ಸಂಕಲನಕ್ಕೆ ಸಮಾಧಾನಕರ ಬಹುಮಾನ ದೊರೆತಿದೆ. ಸಮಾಧಾನಕರ ಬಹುಮಾನವು ರೂ ೧೫೦೦/- ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಈ ತಿಂಗಳ ೩೦ರಂದು ಬೆಂಗಳೂರಿನ ಬಿ.ಎಂ.ಶ್ರೀ. ಪ್ರತಿಷ್ಠಾನದ ಸಭಾಂಗಣದಲ್ಲಿ ಕನ್ನಡ ಗೆಳೆಯರ ಬಳಗದ ವಾರ್ಷಿಕ ಪ್ರಶಸ್ತಿ, ಪ್ರದಾನ, ಕನ್ನಡ ಮಾಧ್ಯಮದ ಮಕ್ಕಳಿಗೆ ಪುರಸ್ಕಾರ ನೀಡುವ ಸಮಾರಂಭ ಇದೆ. ‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’ವನ್ನೂ ಅದೇ ಸಮಾರಂಭದಲ್ಲಿ ಕೊಡಮಾಡಲಾಗುವುದು.

‍ಲೇಖಕರು Admin

November 19, 2021

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: