ಕನ್ನಡನಾಡು, ನುಡಿ, ಸಂಸ್ಕೃತಿಗಳನ್ನು ಕುರಿತ ಪುಸ್ತಕಕ್ಕೆ ಕನ್ನಡ ಗೆಳೆಯರ ಬಳಗವು ಕೊಡುಮಾಡುವ ೨೦೨೧ನೆ ಸಾಲಿನ ‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’ವನ್ನು ಘೋಷಿಸಲಾಗಿದೆ.
ವಿಮರ್ಶಕ ಡಾ. ಎಚ್.ಎಸ್. ಸತ್ಯನಾರಾಯಣ ಅವರ ಅಂಕಣ ಬರಹ ಸಂಕಲನ ‘ಅಪೂರ್ವ ಒಡನಾಟ’ ಪ್ರಶಸ್ತಿಗೆ ಪಾತ್ರವಾಗಿದ್ದು ರೂ ೩ ಸಾವಿರ ನಗದು, ಪ್ರಶಸ್ತಿ ಪತ್ರವನ್ನು ನೀಡಲಾಗುವುದು.
ಹಾಸನದ ಕಾಲೇಜು ಉಪನ್ಯಾಸಕಿ ಸುಮಾ ವೀಣಾ ಅವರ ‘ನಲಿವಿನ ನಾಲಗೆ’ ಪ್ರಬಂಧ ಸಂಕಲನಕ್ಕೆ ಸಮಾಧಾನಕರ ಬಹುಮಾನ ದೊರೆತಿದೆ. ಸಮಾಧಾನಕರ ಬಹುಮಾನವು ರೂ ೧೫೦೦/- ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಈ ತಿಂಗಳ ೩೦ರಂದು ಬೆಂಗಳೂರಿನ ಬಿ.ಎಂ.ಶ್ರೀ. ಪ್ರತಿಷ್ಠಾನದ ಸಭಾಂಗಣದಲ್ಲಿ ಕನ್ನಡ ಗೆಳೆಯರ ಬಳಗದ ವಾರ್ಷಿಕ ಪ್ರಶಸ್ತಿ, ಪ್ರದಾನ, ಕನ್ನಡ ಮಾಧ್ಯಮದ ಮಕ್ಕಳಿಗೆ ಪುರಸ್ಕಾರ ನೀಡುವ ಸಮಾರಂಭ ಇದೆ. ‘ಹಾಮಾನಾ ಕನ್ನಡ ಜಾಗೃತಿ ಪುಸ್ತಕ ಬಹುಮಾನ’ವನ್ನೂ ಅದೇ ಸಮಾರಂಭದಲ್ಲಿ ಕೊಡಮಾಡಲಾಗುವುದು.
0 ಪ್ರತಿಕ್ರಿಯೆಗಳು