ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಂಡರೆ ಕೈ ಮುಗಿಯಿರಿ..

ಅಲೆಮಾರಿ

ಒಳಗೂ ಹೊರಗೂ..

ಚಿತ್ರ: ಓಂ ಶಿವಪ್ರಕಾಶ್ ಎಚ್ ಎಲ್

ಕ್ಷಮಿಸುವ ಭಗವಂತನ
ಕೈಯೂ ರಕ್ತವಾಗಿದೆ.
ಅವನಿಗೂ ಕಾಡುತ್ತಿದೆ ಪಾಪ ಪ್ರಜ್ಞೆ.

ಗರ್ಭಗುಡಿ ಮಂದ ಬೆಳಕು,
ಸೂತಕದ ಮನೆಯ ಹಣತೆಯಂತೆ
ಕಂಡಿದೆಯಂತೆ ಅವಗೆ.

ಕಣ್ಣುಜ್ಜಿ ಗೊಂಡಾಗಲೆಲ್ಲ
ರಕ್ತದ ವಾಸನೆ ಮೂಗಿಗೆ ಅಡರಿ
ದಿಕ್ಕೆಡುವನು.

ಭಕ್ತರು ನೂರು ಮಂದಿ
ನೆರೆದು ನಿಂತರೆ,
ತತ್ತರಿಸಿ ದುಃಸ್ವಪ್ನ
ಕಂಡಂತೆ ನಡುಗುವನು..

ಊರ ಬೀರನು,ಸಾಬರ ಪೀರನು,
ಜಾಡಮಾಲಿಗಳಂತೆ ಕೊಳೆಯನ್ನು,
ಕಳೆಬರವನ್ನುಎತ್ತೆತ್ತಿ ಸ್ವಚ್ಛ ಮಾಡುತ್ತಿದ್ದರೆ,
ದೇಗುಲದ ಕಟ್ಟೆ ಮೇಲೆ ಅನಾಥನಾಗಿಹನು…

ಗಂಟೆ ನಾದ ಮೀರಿದ
ಗುಂಡುಗಳು ಸದ್ದು,
ಶಂಖನಾದ ಸೀಳಿದ ಆಕ್ರಂದನ,
ಗುಡಿಯ ಒಳಗೆಲ್ಲಾ ಮಾರ್ದನಿಸಿ ಆಕ್ರೋಶ…
ಸರ್ವಶಕ್ತನೂ ನಿಶ್ಯಕ್ತನಾಗಿಹನು.

ದಾರಿ ಹೋಕನು ಮುಂದೆ
ನನ್ನ ಕಾಪಾಡು ದೇವ ಎಂದು ಕೈಚೆಲ್ಲಿಹನು
ಗರ್ಭಗುಡಿಯ ದೇವ ಅಂಗಲಾಚುತಿಹನು..
*****
ಅಮಲುಗತ್ತಲು,ಬರೀ ಮಂತ್ರಗಳು
ಏನೂ ಕೇಳದೆ,
ಜಗದಲ್ಲೇನುಗುತ್ತದೆ ತಿಳಿಯದೆ
ಮೂಢನಾಗಿಹನೆಂದು ಊರಾಚೆ
ಬೆಟ್ಟದ ಮೇಲೆ ಕೂತಿಹನಂತೆ..
ಕಂಡರೆ ಕೈಮುಗಿದು
ಅಲ್ಲಿಂದಲೂ ಕಳಿಸಿಕೊಟ್ಟು ಬಿಡಿ..

‍ಲೇಖಕರು avadhi

19 April, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading