ಕಟಕಟೆಯಲ್ಲಿ ನಿಂತ ಕವಿತೆ..

 

 

ಕೆ. ಸಚ್ಚಿದಾನಂದನ್

ಕನ್ನಡಕ್ಕೆ: ಚಿದಂಬರ ನರೇಂದ್ರ 

 

 

 

ಮರಿ,
ತೊಗೋ ಈ ಕಿತ್ತಳೆ ಹಣ್ಣು
ಗಫೂರ್ ನ ಕೊಲ್ಲಬೇಡ
ಅವ ನನ್ನ ಮೊಮ್ಮಗ.

ಮರಿ,
ತೊಗೋ ಈ ಸೇಬು
ಇಸ್ಮಾಯಿಲ್ ನ ಬಿಟ್ಟು ಬಿಡು
ಆವಾ ನನ್ನ ಸಂಬಂಧಿ.

ಮರಿ,
ಈ ಆಲಿವ್ಸ್ ತೊಗೋ
ನಿಸ್ಸಾರ್ ಗೆ ಏನು ಮಾಡಬೇಡ
ಅವನು ಒಳ್ಳೆಯ ಹುಡುಗ.

ಕೊಲ್ಲಲೇ ಬೇಕಾದರೆ
ಈ ಮುದುಕಿಯನ್ನು ಕೊಲ್ಲು
ಮಾತು ಸತ್ತ ಊರಿನಲ್ಲಿ
ಈ ಮಾತಿನ ಮಲ್ಲಿಗೇನು ಕೆಲಸ?

ದೇವರನ್ನೂ ಕೊಲ್ಲು
ಅವನಿಗೂ ಬಂದೂಕಿನ ಹೊಗೆ
ಆಗಿ ಬರುವುದಿಲ್ಲ.

ಅವಳ ರಕ್ತದೊಂದಿಗೆ ಚಿಮ್ಮಿದೆ
ನನ್ನ ಭಾಷೆ,
ಸಿಡಿದ ಗುಂಡಿನ ಚೂರುಗಳು
ನನ್ನ ಅಕ್ಷರಗಳನ್ನು ಘಾಸಿ ಮಾಡಿವೆ,
ನನ್ನ ಕವಿತೆಯಿಂದ ರಕ್ತ ಸೋರುತ್ತಿದೆ.

ಕಟಕಟೆಯಲ್ಲಿ ನಿಂತ ಕವಿತೆ
ವಿಷದ ಗಾಳಿಯನ್ನು
ಸಹಿಸಿಕೊಳ್ಳದೆ ಹೋದರೆ ಹೇಗೆ?

( Based on an incident in the recent Syrian civil war where an old woman, distributing fruits to government soldiers, pleaded for the life of radical democrats)

‍ಲೇಖಕರು avadhi

September 13, 2017

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

೧ ಪ್ರತಿಕ್ರಿಯೆ

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: