ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ವತಿಯಿಂದ ಅಮೃತ ಸ್ವಾತಂತ್ರ್ಯದ ಅಂಗವಾಗಿ ಪತ್ರಿಕೋದ್ಯಮದ ಹಿರಿಯರಿಗೆ ‘ಮನೆಯಂಗಳದಲ್ಲಿ ಮನದುಂಬಿ ನಮನ’ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸುದ್ದಿಮನೆಯಲ್ಲಿ ಕೆಲಸ ಮಾಡಿದ ಅತ್ಯಂತ ಹಿರಿಯ ಪತ್ರಕರ್ತರಾದ ಕಲ್ಲೆ ಶಿವೋತ್ತಮ ರಾವ್ ಅವರಿಗೆ ಅವರ ಮನೆ ಅಂಗಳದಲ್ಲಿ ಗೌರವಿಸಲಾಯಿತು.
ಈ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಬೆಂಗಳೂರಿನಲ್ಲಿ 14ರಂದು ಭಾನುವಾರ ಚಾಲನೆ ನೀಡಲಾಯಿತು.
ವಿಶಾಲ ಕರ್ನಾಟಕ, ಪ್ರಜಾವಾಣಿ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಜನಪ್ರಗತಿ ಪತ್ರಿಕೆಯ ಸಂಪಾದಕರಾಗಿದ್ದ ಹಿರಿಯ ಚೇತನ ಕಲ್ಲೆ ಶಿವೋತ್ತಮ ರಾವ್ ಅವರಿಗೆ ತೊಂಬತ್ತರಡು (92) ವಸಂತಗಳು ತುಂಬಿದ ಸಂಭ್ರಮ. ಈ ಹೊತ್ತಿನಲ್ಲಿ
ಅವರಿಗೆ ಕೆಯುಡಬ್ಲ್ಯೂಜೆ ವತಿಯಿಂದ ಗೌರವ ಸಮರ್ಪಣೆ ಮಾಡಲಾಯಿತು.
ಅಭಿಯಾನ:
ಆಯಾ ಜಿಲ್ಲೆ ಮತ್ತು ತಾಲ್ಲೂಕು ಪತ್ರಕರ್ತರ ಸಂಘಗಳು ಇದೇ ಮಾದರಿಯಲ್ಲಿ ಹಿರಿಯ ಪತ್ರಕರ್ತರನ್ನು ಭೇಟಿ ಮಾಡಿ ಗೌರವ ಸಲ್ಲಿಸುವ ಅಭಿಯಾನ ಮಾಸಾಂತ್ಯದ ತನಕ ನಡೆಯಲಿದೆ ಎಂದು ತಗಡೂರು ತಿಳಿಸಿದ್ದಾರೆ.
0 ಪ್ರತಿಕ್ರಿಯೆಗಳು