ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಕಾಡುವ ಒಂದು ಹಾಡು..

ಕಾಡುವ ಒಂದು ಹಾಡು ನಿಮಗಾಗಿ. ಅಪರಿಚಿತ’ ಸಿನೆಮಾದಿಂದ.

ಸಂಗ್ರಹ: ಯಜ್ಞೇಶ್

ಸವಿನೆನಪುಗಳು ಬೇಕು ಸವಿಯಲೀ ಬದುಕು
ಕಹಿನೆನಪು ಸಾಕೊಂದು ಮಾಸಲೀ ಬದುಕು
ಬೆಂಬಿಡದ ಆ ನೆನಪು ಮರುಕಳಿಸಿ ದಿನವೆಲ್ಲ
ಕಾಡುತಿದೆ ಮನವ

ಸವಿನೆನಪುಗಳು ಬೇಕು ಸವಿಯಲೀ ಬದುಕು…

ಪ್ರಿಯತಮನ ಒಲವಿಂದ ಕನಸುಗಳು ಮೂಡಿ
ಇನಿಯನ ಎದೆಗೊರಗಿ ಆಸರೆಯ ಬೇಡಿ
ಸರಸ ಸವಿಯ ಬಯಸಿದೆನು ನಾನು
ವಿರಹ ವಿಫಲ ಫಲಿಸಿದವು ನನಗೆ
ಇನಿಯನ ಎದೆ ಬಡಿತ ಗುಂಡಿನ ದನಿಗಿರಿದು
ಮಾಸುತಿದೆ ಕನಸು

ಸವಿನೆನಪುಗಳು ಬೇಕು ಸವಿಯಲೀ ಬದುಕು…

ಬೀಸುತಿಹ ತಂಗಾಳಿ ಬಿಸಿಯಾಗಿ ಕಾಡಿ
ನೆನಪಿನ ಭೀತಿಯಲಿ ನಾ ಬಂದಿಯಾಗಿ
ಮನಸು ಹೃದಯ ನೊಂದು ನೋವಾಗಿದೆ
ಒಲವು ನಲಿವು ಮೂಡಿ ಮತಕಾಗಿದೆ
ಅರಳುವ ಹೂವೊಂದು ಅಮರವ ಭಯದಲೀ
ಸಾಗುತಿದೆ ಬದುಕು

ಸವಿನೆನಪುಗಳು ಬೇಕು ಸವಿಯಲೀ ಬದುಕು…

‍ಲೇಖಕರು avadhi

27 April, 2010

1

ನಿಮಗೆ ಇವೂ ಇಷ್ಟವಾಗಬಹುದು…

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್

ದೆಹಲಿಯಲ್ಲಿ ರಹಮತ್ ತರೀಕೆರೆ : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರಲ್ಲಿ ಅತ್ಯಂತ ಕಿರಿಯರು! ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಸ್ವೀಕರಿಸಲು ದೆಹಲಿಗೆ ಬಂದ ರಹಮತ್ ತರೀಕೆರೆ ಅವರೊಂದಿಗೆ ಕೆಂಪುಕೋಟೆಗೆ ಒಂದಷ್ಟು ಸಮಯ ಕಳೆಯಬೇಕು ಎನ್ನುವ ಇರಾದೆಯಿತ್ತು. ಕೆಂಪುಕೋಟೆಯ ಪರವಾಗಿ ವೈ. […]

ಪ್ರಸಾದ್ ಸ್ವಗತ…

ಪ್ರಸಾದ್ ಸ್ವಗತ…

– ಜಿ.ರಾಜಶೇಖರ ಉಡುಪಿ ನಿಮ್ಮ ಕವಿತೆಗಳು ನಿಜಕ್ಕೂ ಒಳ್ಳೆಯ ರಚನೆಗಳಾಗಿವೆ. ಕಾವ್ಯದ ಲಯದಲ್ಲಿ ನೀವು ತುಂಬಾ ವೈವಿಧ್ಯಮಯವಾದ ಪ್ರಯೋಗಗಳನ್ನು ನಡೆಸಿದ್ದೀರಿ. ಹೊಸಗನ್ನಡ ಕಾವ್ಯದ ಕೆ.ಎಸ್.ನ.,ಅಡಿಗ , ಬೇಂದ್ರೆ ಮುಂತಾದ ಕವಿಗಳ ಸಾಲುಗಳನ್ನು ಸಹ ನೀವು ತುಂಬಾ ಅರ್ಥ ಪೂರ್ಣವಾಗಿ ದುಡಿಸಿಕೊಂಡಿದ್ದಿರಿ. ಇದು ನನಗೆ […]

ನಗ್ತಾರೆ ರಾಮಯ್ಯ

ನಗ್ತಾರೆ ರಾಮಯ್ಯ

-ಸೂತ್ರಧಾರ ರಾಮಯ್ಯ ಮುನ್ ನಗೆ ನುಡಿ ಜೀವನವನ್ನು ವಿಕಟ ದೃಷ್ಟಿಯಿಂದ ನೋಡುವ , ಆಡುವ ಮಾತಿನಲ್ಲಿ ಗಾದೆಗಳನ್ನು ಬಳಸುತ್ತಾ ಶ್ಲೇಶಾರ್ಥಗಳನ್ನು ಹೊರಡಿಸುವ ಹವ್ಯಾಸ ನನಗೆ ಬುದ್ಧಿ ಬಂದಾಗಿನಿಂದ ಇದೆ. ಈ ಗೀಳು ನನಗೆ ಯಾವಾಗ, ಯಾರಿಂದ ಅಂಟಿಕೊಂಡು ಎಂದು ಒಮ್ಮೆ ಹಿಂದಿರುಗಿ […]

2 Comments

  1. Shankar Prasad

    ಇದೆ ರೀತಿಯ ಇನ್ನೊಂದು ಹಾಡು “ಹೋದೆಯ ದೂರ ಓ ಜೊತೆಗಾರ..” ವಿ ಮನೋಹರ್ ಬರೆದ ಇದರ ಸಾಹಿತ್ಯ ಇಲ್ಲಿದೆ :http://www.kannadalyrics.com/?q=node/465
    ಹಾಡನ್ನು ಇಲ್ಲಿ ನೋಡಿ: http://www.youtube.com/watch?v=NOUgv7dLnYQ

  2. visharada

    There are mistake in lyrics.

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading