ಕೆ ಶರೀಫಾ ಹಾಗು ಮಧುರಾಣಿ ಹೆಚ್ ಎಸ್ ಗೆ ‘ಈ ಹೊತ್ತಿಗೆ’ ಪ್ರಶಸ್ತಿ…

೨೦೨೧ರ ಡಿಸೆಂಬರ್ ತಿಂಗಳಲ್ಲಿ, ಈ ಹೊತ್ತಿಗೆ ಟ್ರಸ್ಟ್ ವತಿಯಿಂದ, ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ಗಾಗಿ ಹಾಗೂ ‘ಕಾವ್ಯ ಪ್ರಶಸ್ತಿ’ಗಾಗಿ ಅಪ್ರಕಟಿತ ಕಥಾ/ಕವನ ಸಂಕಲನ ಸ್ಪರ್ಧೆಗಳ ಫಲಿತಾಂಶ ಇದೀಗ ಪ್ರಕಟವಾಗಿದೆ. ಇದೇ ಮಾರ್ಚ್ ೨೭ರಂದು ಜರುಗಲಿರುವ ಈ ಹೊತ್ತಿಗೆಯ ‘ಹೊನಲು’ ಕಾರ್ಯಕ್ರಮದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬೆಂಗಳೂರಿನ ಕಪ್ಪಣ್ಣ ಅಂಗಳದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಲಬುರಗಿ ಮೂಲದ ಡಾ. ಕೆ. ಶರೀಫಾ ಅವರ ಅಪ್ರಕಟಿತ ಕಥಾಸಂಕಲನ, ‘ನೀರೊಳಣ ಕಿಚ್ಚು’, ೨೦೨೨ರ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ಹಾಗೂ ಬೆಂಗಳೂರಿನ ಶ್ರೀಮತಿ. ಮಧುರಾಣಿ ಹೆಚ್.ಎಸ್ ಅವರ ‘ನೀಲಿ ಚುಕ್ಕಿಯ ನೆರಳು’ ಅಪ್ರಕಟಿತ ಕವನ ಸಂಕಲನ, ‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ ಪಡೆದುಕೊಂಡಿವೆ. 

ಎರಡೂ ಪ್ರಶಸ್ತಿಗಳು ತಲಾ  ರೂ. ೧೦,೦೦೦ ನಗದು ಹಾಗು ಪ್ರಶಸ್ತಿ ಫಲಕವನ್ನೊಳಗೊಂಡಿವೆ. 

 ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ವಿಜೇತರಾದ ಕನ್ನಡದ ಹಿರಿಯ ಕವಿ ಮತ್ತು ಹೋರಾಟಗಾರರಾಗಿರುವ ಡಾ. ಕೆ. ಶರೀಫಾ ಅವರು ಕೃಷಿ ಮಾರುಕಟ್ಟೆ ಇಲಾಖೆಯಲ್ಲಿ ಮಾರುಕಟ್ಟೆ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ.  ನಾಡಿನ ಖ್ಯಾತ ಕತೆಗಾರ್ತಿ ಶ್ರೀಮತಿ ವೀಣಾ ಶಾಂತೇಶ್ವರ ಅವರು ಈ ಬಾರಿಯ ‘ಈ ಹೊತ್ತಿಗೆ ಕಥಾ ಪ್ರಶಸ್ತಿ’ ವಿಭಾಗದ ತೀರ್ಪುಗಾರರಾಗಿದ್ದರು. 

‘ಈ ಹೊತ್ತಿಗೆ ಕಾವ್ಯ ಪ್ರಶಸ್ತಿ’ಗೆ ಭಾಜನರಾಗಿರುವ ಶ್ರೀಮತಿ. ಮಧುರಾಣಿ ಹೆಚ್.ಎಸ್ ಅವರು ಮೂಲತಃ ದಾವಣಗೆರೆ ಸೀಮೆಯವರಾಗಿದ್ದು ಪ್ರಸ್ತುತ ಮೈಸೂರಿನಲ್ಲಿ ಇಂಗ್ಲಿಷ್ ಅಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಕನ್ನಡದ ಹೆಮ್ಮೆಯ ಕವಿ ಡಾ. ಎಚ್. ಎಸ್ ಶಿವಪ್ರಕಾಶ್ ಅವರು ಈ ಹೊತ್ತಿಗೆಯ ಕಾವ್ಯ ಪ್ರಶಸ್ತಿಯ ತೀರ್ಪುರಗಾರರಾಗಿದ್ದರು. ಇದು ಈ ಹೊತ್ತಿಗೆಯ ಮೊದಲ ಕಾವ್ಯ ಪ್ರಶಸ್ತಿಯಾಗಿದೆ.

ಇದೇ ಮಾರ್ಚ್ ೨೭ರಂದು, ಬೆಂಗಳೂರಿನ ಜೆಪಿ ನಗರದಲ್ಲಿರುವ ಕಪ್ಪಣ್ಣ ಅಂಗಳ ಸಭಾಂಗಣದಲ್ಲಿ ನಡೆಯಲಿರುವ, ಈ ಹೊತ್ತಿಗೆಯ ಹೊನಲು ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

‍ಲೇಖಕರು Admin

February 20, 2022

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: