ಕೊನೆಯಿರದ ಪ್ರವಾಹದಲ್ಲೊಂದು ನಡುಗಡ್ಡೆ ಇದು

೩೧ ಮಾರ್ಚ್ ೨೦೧೨ಕ್ಕೆ ಮುಚ್ಚಲ್ಪಡುವ ಮಂಗಳೂರಿನ ಅತ್ರಿ ಬುಕ್ ಸೆಂಟರ್ ಕುರಿತು ರಾಧೇಶ್ ತೋಳ್ಪಾಡಿ ಎಸ್, ಉಪಾಧ್ಯಾಯ ಬರೆದ ಕವನ

 

ಯಾಕತ್ರಿ ಅನುವವರಿಗೇನು ಹೇಳುವುದು?

– ರಾಧೇಶ್ ತೋಳ್ಪಾಡಿ ಎಸ್, ಉಪಾಧ್ಯಾಯ

ಅತ್ರಿ ಬುಕ್ ಸೆ೦ಟರ್   ಕೊನೆಯಿರದ ಪ್ರವಾಹದಲ್ಲೊಂದು ನಡುಗಡ್ಡೆ ಇದು ಆಲಿಬಾಬನ ಗುಹೆ ತೆರಕೊಂಡಾಗ ಆ ಹುಡುಗ ಚಪ್ಪಾಳೆ ತಟ್ಟಿ ಕೇಕೆ ಹಾಕಿದ್ದು ಇಲ್ಲೇ   ಇದರ ಕಿರುದಾರಿ, ಓಣಿಗಳಲ್ಲೇ ಗೋಚರಿಸಿದ್ದು ಅಲ್ಲಮನ ಬಯಲು, ಎಷ್ಟೊಂದು ಮುಗಿಲು, ನಕ್ಶತ್ರ ಚಂದ್ರಲೋಕದ ತಾಯಿ ಬೆಳದಿಂಗಳು. ನಾಯಿಗುತ್ತಿ, ಸರಸೋತಿ, ಪಾರೋತಿಯರೆಲ್ಲ ಸಿಕ್ಕದ್ದು ಇಲ್ಲೇ. ಇಲ್ಲೇ ಆ ಮಹಾವಟವೃಕ್ಷ, ಅದರ ಹರೆಯದಲ್ಲಿ ಗೋವಿಂದ ಕೊಳಲನೂದುತ್ತ, ಕೇಳಬಹುದಾಗಿತ್ತು ಬಗೆಬಗೆಯ ಹಕ್ಕಿಗಳ ಒಡಲಿನುಲಿ, ನಾಡಿಮಿಡಿತ.     ಯಾಕತ್ರಿ ಅನುವವರಿಗೇನು ಹೇಳುವುದು? ಉಪಮೆ-ಅಲಂಕಾರ ಬಿಟ್ಟು ಹೇಳುವುದಾದರೆ ಮಳೆ ಬಂದಾಗ ನೀಡಿದ್ದು ಇದೇ ತಲೆಯ ಮೇಲೊಂದು ಸೂರು. ಮೆಟ್ಟಲುಗಳನ್ನೇರಿ ಹೋದವರಿಗಂತೂ ಅದು ಅವರದೇ ಬಾನಂಗಳ! ಚತುರ್ವಿಧದ ರಸ್ತೆಗಳೂ ಸಂಧಿಸುವ ಒಂದು ಸಾರ್ವಜನಿಕ ಸ್ಥಳ ಪ್ರತಿಯೊಬ್ಬರ ಖಾಸಗಿ ಭಾಗವಾದದ್ದೊಂದು ಪವಾಡ!     ಏನು ಬೇಸರವೋ ಈ ನಡುಗಡ್ಡೆಗೆ, ನೀರಿಕಿಳಿದವನೆ ಬಲ್ಲ! ಅಮುಕಿ ಹಿಡಿದವೆ ಬಾಯಿಯೇ ದೇಹವಾಗಿರುವ ಮಕರಾಕ್ಷ ಬಳಗ? ಎಲ್ಲಿ ಹುಡುಕುವುದಿನ್ನೆಲ್ಲಿ ತಡಕಾಡುವುದು ಆ ಹಸಿರು ಹೊಲ ಬಿದಿರು ಮೆಳೆ ಕೊಳಲ? ತಂತಮ್ಮ ತಾರೆಗಳ ಕೂಡೆ ಪಿಸುನುಡಿಯ ಆಡಗೊಟ್ಟವರ?    ]]>

‍ಲೇಖಕರು G

March 7, 2012

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: