ಸಾಹಿತ್ಯ, ಸಮಾಜಸೇವೆ, ಪತ್ರಿಕೋದ್ಯಮದ ಸೇವೆಗಾಗಿ ಗೊರೂರು ಪಂಕಜ ಅವರನ್ನು ಆರ್ಯಭಟ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
‘ಬೆಳಕಾಗುವ ಹಂಬಲ’ ಎಂಬ ಕೃತಿಯ ಮೂಲಕ ಸಾಹಿತ್ಯ ಲೋಕಕ್ಕೆ ಪರಿಚಯವಾದ ಪಂಕಜ ಅವರ ಕಥೆ, ಕವನ, ವೈಚಾರಿಕ ಲೇಖನ, ಅಂಕಣ ಬರಹಗಳು ಜಿಲ್ಲಾ ಮತ್ತು ರಾಜ್ಯಮಟ್ಟದ ವಿವಿಧ ಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ ಮತ್ತು ಆಕಾಶವಾಣಿಯಲ್ಲಿ ಪ್ರಕಟಗೊಂಡಿವೆ.
ಇದೇ ೨೫ರಂದು ಸಂಜೆ ೬ ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ್, ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಹಿರಿಯ ನಟಿ ಭಾರತಿ ವಿಷ್ಣುವರ್ಧನ್, ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅವರು ಮುಖ್ಯ ಅತಿಥಿಗಳಾಗಿರುತ್ತಾರೆ.
0 ಪ್ರತಿಕ್ರಿಯೆಗಳು