ಕಳೆದ ಹದಿನೇಳು ವರುಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ, ಈ ಸಾಲಿನ ‘ಛಂದ ಪುಸ್ತಕ ಬಹುಮಾನ’ಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಕತೆಗಾರರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಗಿಲ್ಲ. ತಮಗೆ ಉತ್ತಮವೆನಿಸಿದ ಸುಮಾರು ಎಂಟರಿಂದ ಹತ್ತು ಸ್ವಂತ ಕತೆಗಳನ್ನು ಕಂಪ್ಯೂಟರ್ನಲ್ಲಿ ಟೈಪ್ ಮಾಡಿ, ಮುದ್ರಿತ ಪುಟಗಳನ್ನು ಕೊರಿಯರ್ ಮೂಲಕ ಕಳುಹಿಸಬೇಕು. ಮುದ್ರಿತ ಪುಟಗಳು A4 ನಲ್ಲಿ ಕನಿಷ್ಠ 50 ಪುಟಗಳಿರಲಿ. ಇ-ಮೇಲ್ ಮುಖಾಂತರ ಕತೆಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಯತಕಾಲಿಕಗಳಲ್ಲಿ ಪ್ರಕಟವಾದ ಅಥವಾ ಅಪ್ರಕಟಿತ ಕತೆಗಳೆರಡನ್ನೂ ಪರಿಗಣಿಸಿದರೂ, ಅಪ್ರಕಟಿತ ಕತೆಗಳಿಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇವೆ.
ಆಯ್ಕೆಯಾದ ಕತೆಗಾರರಿಗೆ ನಲವತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ. ಸುಂದರವಾದ ಪುಸ್ತಕ ಬಿಡುಗಡೆ ಸಮಾರಂಭವನ್ನೂ ಮಾಡಲಾಗುವುದು. ಹಸ್ತಪ್ರತಿಯನ್ನು ಯಾವುದೇ ಕಾರಣಕ್ಕೂ ಹಿಂತಿರುಗಿಸಲಾಗುವುದಿಲ್ಲ. ಆದ್ದರಿಂದ ಮೂಲಪ್ರತಿಯನ್ನು ಕಳುಹಿಸಕೂಡದೆಂದು ಕೋರುತ್ತೇವೆ. ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.
ಕತೆಗಳನ್ನು ಕಳಿಸಬೇಕಾದ ವಿಳಾಸ:
ಛಂದ ಪುಸ್ತಕ,
C/O ವಸುಧೇಂದ್ರ, ಐ-004,
ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ,
ಬೆಂಗಳೂರು–560 076
(ವಾಟ್ಸಾಪ್. 98444 22782)
ಹಸ್ತಪ್ರತಿ ಕಳುಹಿಸಲು ಕೊನೆಯ ದಿನಾಂಕ: ಜುಲೈ 31, 2022ಹೆಚ್ಚಿನ ವಿವರಗಳಿಗೆ: [email protected]
0 ಪ್ರತಿಕ್ರಿಯೆಗಳು