ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಛಂದ ಪುಸ್ತಕ ಸ್ಪರ್ಧೆಗೆ ಆಹ್ವಾನ

ಕಳೆದ ಆರು ವರ್ಷಗಳಿಂದ ಯಶಸ್ವಿಯಾಗಿ ಹೊಸ ಕತೆಗಾರರ ಪುಸ್ತಕಗಳನ್ನು ಪ್ರಕಟಿಸುತ್ತಿರುವ ಛಂದ ಪುಸ್ತಕ 2010ನೇ ಸಾಲಿನ ಬಹುಮಾನಕ್ಕಾಗಿ ಹಸ್ತಪ್ರತಿಗಳನ್ನು ಆಹ್ವಾನಿಸುತ್ತಿದೆ.
ಇದುವರೆಗೂ ಒಂದೂ ಕಥಾಸಂಕಲನ ಹೊರತಂದಿರದ ಲೇಖಕರಿಗೆ ಮಾತ್ರ ಅವಕಾಶ. ಸಾಹಿತ್ಯದ ಇತರ ಪ್ರಕಾರಗಳಲ್ಲಿ ಒಂದೆರಡು ಪುಸ್ತಕಗಳು ಪ್ರಕಟವಾಗಿದ್ದರೆ ಪರವಾಯಿಲ್ಲ.  ತಮಗೆ ಉತ್ತಮವೆನಿಸಿದ ಸುಮಾರು 10 ಪ್ರಕಟಿತ/ಅಪ್ರಕಟಿತ ಸ್ವಂತ ಕತೆಗಳನ್ನು ಡಿಟಿಪಿ ಮಾಡಿಸಿ ಇಲ್ಲವೇ ಸ್ಫುಟವಾದ ಕೈಬರಹದಲ್ಲಿ ಬರೆದು ಕಳುಹಿಸಬೇಕು.  ಹಸ್ತಪ್ರತಿ ಹಿಂತಿರುಗಿಸಲಾಗುವದಿಲ್ಲ.
ಆಯ್ಕೆಯಾದ ಕತೆಗಾರರಿಗೆ ಹತ್ತು ಸಾವಿರ ರೂಪಾಯಿ ಬಹುಮಾನ ಕೊಟ್ಟು, ಅವರ ಕಥಾ ಸಂಕಲನವನ್ನು ಛಂದ ಪುಸ್ತಕ ಪ್ರಕಟಿಸುತ್ತದೆ.  ಈ ಪುಸ್ತಕವನ್ನು 2010ರ ನವೆಂಬರ್ ತಿಂಗಳ ಕೊನೆಯಲ್ಲಿ  ಬೆಂಗಳೂರಿನಲ್ಲಿ ನಡೆಯವ ಸುಂದರ ಸಮಾರಂಭದಲ್ಲಿ  ಬಿಡುಗಡೆ ಮಾಡಲಾಗುವುದು.
ಪುಸ್ತಕದ ಆಯ್ಕೆ ಮತ್ತು ಪ್ರಕಟಣೆಯಲ್ಲಿ ಪ್ರಕಾಶಕರದೇ ಅಂತಿಮ ನಿರ್ಧಾರ.  ಕತೆಗಳನ್ನು ಕಳಿಸಬೇಕಾದ
ವಿಳಾಸ:
ಛಂದ ಪುಸ್ತಕ, c/o ವಸುಧೇಂದ್ರ, ಐ-004, ಮಂತ್ರಿ ಪ್ಯಾರಡೈಸ್, ಬನ್ನೇರುಘಟ್ಟ ರಸ್ತೆ, ಬೆಂಗಳೂರು – 76 (ದೂ. 98444 22782)
ಕೊನೆಯ ದಿನಾಂಕ: ಜುಲೈ 10, 2010
ವಿವರಗಳಿಗೆ: vas123u@rocketmail.com
]]>

‍ಲೇಖಕರು avadhi

23 June, 2010

2 Comments

  1. v.n.laxminarayana

    ಮಾನ್ಯರೆ,
    ನೀವು ಕೊಟ್ಟ ಇ ಮೇಲ್ ವಿಳಾಸಕ್ಕೆ ಸ್ಪಷ್ಟನೆ ಕೋರಿ ಕಳಿಸಿದ ಇಮೇಲ್ ವಾಪಸ್ಸು ಬಂತು. ಇಮೇಲ್ ಮೂಲಕವೂ ಕತೆಗಳನ್ನು ಕಳಿಸಬಹುದೆ? ಹೌದಾದರೆ ಜಿಮೇಲ್ಅಥವಾ ತಲುಪಬಹುದಾದ ವಿಳಾಸ ಕೊಡಿ
    ವಿ.ಎನ.ಎಲ್

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading