‘ಬಹುರೂಪಿ’ಯ ಪ್ರಕಟಣೆ, ಹಿರಿಯ ಪತ್ರಕರ್ತ ಜಿ ಎನ್ ರಂಗನಾಥರಾವ್ ಅವರ ‘ಆ ಪತ್ರಿಕೋದ್ಯಮ..’ ಕೃತಿ ಬಿಡುಗಡೆ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಬಹುರೂಪಿ ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಖ್ಯಾತ ವಿಮರ್ಶಕ ಪ್ರೊ ಸಿ ಎನ್ ರಾಮಚಂದ್ರನ್ ಅವರು ಕೃತಿ ಬಿಡುಗಡೆ ಮಾಡಿದರು.
ಇದೇ ಸಂದರ್ಭದಲ್ಲಿ ಜಿ.ಎನ್.ರಂಗನಾಥ ರಾವ್ ಅವರಿಗೆ ಕೆಯುಡಬ್ಲ್ಯೂಜೆ ವತಿಯಿಂದ ಸನ್ಮಾನಿಸಲಾಯಿತು.
ಸಾಹಿತಿ, ದೂರದರ್ಶನದ ಹಿರಿಯ ಕಾರ್ಯಕ್ರಮ ನಿರ್ಮಾಪಕಿ ಆರತಿ ಎಚ್ ಎನ್ ಪುಸ್ತಕದ ಕುರಿತು ಮಾತನಾಡಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಿದ್ದರು.
ಬಹುರೂಪಿಯ ಜಿ ಎನ್ ಮೋಹನ್, ಶ್ರೀಜಾ ವಿ ಎನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಜಿ ಸಿ ಲೋಕೇಶ್, ಉಪಾಧ್ಯಕ್ಷ ಭವಾನಿ ಸಿಂಗ್ ಠಾಕೂರ್ ಉಪಸ್ಥಿತರಿದ್ದರು.
ಕಾಯ೯ಕ್ರಮದ ಫೋಟೋ ಆಲ್ಬಂ ಇಲ್ಲಿದೆ
0 ಪ್ರತಿಕ್ರಿಯೆಗಳು