ಡಾ. ಯು.ಬಿ. ರಾಜಲಕ್ಷ್ಮಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತೆ, ‘ತರಂಗ’ದ ಸಂಪಾದಕಿ ಡಾ. ಯು.ಬಿ. ರಾಜಲಕ್ಷ್ಮಿ ಅವರನ್ನು ಆಯ್ಕೆ ಮಾಡಲಾಗಿದೆ.

ಡಾ. ಯು.ಬಿ. ರಾಜಲಕ್ಷ್ಮಿ ಕಳೆದ 37 ವರ್ಷಗಳಿಂದ ಪತ್ರಿಕಾರಂಗದಲ್ಲಿದ್ದಾರೆ. ಉಡುಪಿಯ ಜಿಲ್ಲೆಯ ಕಾರ್ಕಳದವರಾದ ಇವರು ಹೊಸ ದಿಗಂತ, ಮುಂಗಾರು, ಟೈಮ್ಸ್ ಆಫ್ ಡೆಕ್ಕನ್ ದಿನಪತ್ರಿಕೆಗಳಲ್ಲಿ ಕೆಲಸಮಾಡಿ 1987 ರಲ್ಲಿ ತರಂಗ ವಾರಪತ್ರಿಕೆಯಲ್ಲಿ ಸೇವೆ ಆರಂಭಿಸಿ ಈಗ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಖಾದ್ರಿ ಶಾಮಣ್ಣ ಟ್ರಸ್ಟ್ ತಿಳಿಸಿದೆ.

ಮೈಸೂರು ವಿವಿಯಲ್ಲಿ ಕನ್ನಡ ಎಂ.ಎ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಪಡೆದು ಹಂಪಿ ವಿವಿಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ. ಹಲವು ಕೃತಿಗಳನ್ನು ರಚಿಸಿರುವ ಇವರು ಸಾಕ್ಷ್ಯಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಮಲೇಷ್ಯಾ ಸರ್ಕಾರದ ಆಹ್ವಾನದ ಮೇಲೆ ಅಧ್ಯಯನ ಪ್ರವಾಸ ಕೈಗೊಂಡಿದ್ದರು. ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯಗಳಲ್ಲಿ ಪರಿಣತಿ ಹೊಂದಿದ್ದಾರೆ.

ಪ್ರಶಸ್ತಿ 15 ಸಾವಿರ ರೂ. ನಗದು ಹಾಗೂ ಫಲಕ ಹೊಂದಿದೆ.

‍ಲೇಖಕರು avadhi

June 5, 2020

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: