ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ಡಿ 6 : ಆ ದಿನ

ಇಲ್ಲಿ ಒಂದು ವ್ಯಂಗ್ಯಚಿತ್ರ ಹಾಗೂ OPEN magazine ಬಯಲಿಗೆಳೆದಿರುವ ಒಂದು ಲೇಖನವಿದೆ. ನೀವು ಓದಲೇಬೇಕು. ಪ್ರತಿಕ್ರಿಯಿಸಿ– ರೇಡಿಯೋ ಅಂಗಡಿಯಿಂದ ಆಕಸ್ಮಿತವಾಗಿ ವ್ಯಂಗ್ಯಲೋಕಕ್ಕೆ ಜಿಗಿದ ಪಿ. ಮಹಮ್ಮದ್ ಇಂದು ನಮ್ಮೊಂದಿಗಿನ ಅತ್ಯುತ್ತಮ ವ್ಯಂಗ್ಯಚಿತ್ರಕಾರರಲ್ಲೊಬ್ಬರು. ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರಿಯ ಮಹಮ್ಮದ್ ಇಂದು ಪರಿಚಿತ ಹೆಸರು. `ಸಂಯುಕ್ತ ಕರ್ನಾಟಕ’, `ಮುಂಗಾರು’ ಪತ್ರಿಕೆಗಳಲ್ಲಿ ವ್ಯಂಗ್ಯಚಿತ್ರಕಾರರಾಗಿ ದುಡಿದಿರುವ ಮಹಮ್ಮದ್  ಖ್ಯಾತ ಆಂಗ್ಲ ದೈನಿಕ `ಹಿಂದುಸ್ತಾನ್ ಟೈಮ್ಸ್’ನ ಪ್ರತಿಷ್ಟಿತ ವ್ಯಂಗ್ಯಚಿತ್ರ ಪ್ರಶಸ್ತಿಯನ್ನು ಕರ್ನಾಟಕಕ್ಕೆ 3 ಬಾರಿ ತಂದುಕೊಟ್ಟ ಹೆಮ್ಮೆ ಇವರದ್ದು. ಹೆಸರಾಂತ ವ್ಯಂಗ್ಯಚಿತ್ರಕಾರ ಆರ‍್.ಕೆ.ಲಕ್ಷ್ಮಣರ ರೇಖೆಗಳಿಗೆ ಮಾರುಹೋದ ಇವರು ಸದಾ ಸಮಾಜದ ನೋವಿಗೆ ಸ್ಪಂದಿಸಿದರು. ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಹಿಡಿದು ಅಯೊದ್ಯೆಯವರೆಗೆ ಇವರ ಬತ್ತಳಿಕೆಯಲ್ಲಿ ಹಲವು ವ್ಯಂಗ್ಯಬಾಣಗಳು. ಕೋಮುವಾದ ತನ್ನ ಕರಾಳ ಹಸ್ತಗಳನ್ನು ಎಲ್ಲೆಡೆ ಚಾಚುತ್ತಿರುವುದನ್ನು ಕಂಡ ಖ್ಯಾತ ವ್ಯಂಗ್ಯಚಿತ್ರಕಾರ ಅಬಿದ್ ಸುರ್ತಿ `ನನ್ನ ಜೋಳಿಗೆಯಲ್ಲಿ ಇನ್ನು ವ್ಯಂಗ್ಯದ ಬಾಣಗಳಿಲ್ಲ’ ಎಂದು ಕಣ್ಣೀರಿಟ್ಟರು. ಅಂತೆಯೇ ಪಿ. ಮಹಮ್ಮದ್ ವ್ಯಂಗ್ಯರೇಖೆಗಳಲ್ಲಿ ಕಂಡ ವಿಷಾದದ ಚಿತ್ರಗಳು ಈ ಪುಸ್ತಕದಲ್ಲಿವೆ ಅಲ್ಲದೆ ಈ ಲೇಖನವನ್ನೂ ನೀವು ಓದಬೇಕುopen ]]>

‍ಲೇಖಕರು G

6 December, 2010

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading