ಇದು ಕನಸುಗಳ ಬೆಂಬತ್ತಿದ ನಡಿಗೆ‍

ಅವಧಿ AVADHI

ಇದು ಕನಸುಗಳ ಬೆಂಬತ್ತಿದ ನಡಿಗೆ...

ತಮಸೋಮಾ ಜೋತಿರ್ಗಮಯ..

ನೀ ಬಂದು ನಿಂದಿಲ್ಲಿ ದೀಪ ಹಚ್ಚಾ
ದೀಪಗಳು ಕಕ್ಕಾಬಿಕ್ಕಿಯಾಗಿವೆ. ಹೋಳಿಗೆಗೆ ಮಾತೇ  ಹೊರಡುತ್ತಿಲ್ಲ. ಪಟಾಕಿಗೆ ಅಕಾಲ ಮಳೆಯಿಂದ ಚಳಿ, ತಂಡಿ. ದೀಪಕ್ಕೆ ವರ್ಷವಿಡೀ ಬೆಳಗುವ ಸೀರಿಯಲ್‌ ಲೈಟ್‌ ಜೊತೆಗೂ, ಹೋಳಿಗೆಗೆ `ಹಳ್ಳಿತಿಂಡಿ’ಯ ಜೊತೆಗೂ, ಪಟಾಕಿಗೆ ಬಾಂಬ್‌ಗಳ ಜೊತೆಗೂ ಸ್ಪರ್ಧೆ ಮತ್ತು ಆ ಸ್ಪರ್ಧೆಯಲ್ಲಿ ಸೋಲು.
ಹಣತೆಗೆ ಬತ್ತಿ ಹೊಸೆಯುತ್ತಿದ್ದ ಅಜ್ಜಿ ತೀರಿಕೊಂಡಿದ್ದಾರೆ, ಅಮ್ಮನಿಗೆ ಕೊಂಚವೂ ಕುಳಿತುಕೊಳ್ಳಲಾಗುತ್ತಿಲ್ಲ, ಬತ್ತಿ ಹೊಸೆಯಲು. ಕಾರಣ: ಕಾಲುನೋವು. ದೀಪಕ್ಕೆ ಕೊಬ್ಬರಿ ಎಣ್ಣೆ ಹಾಕುತ್ತಾರಾ, ಒಳ್ಳೆಣ್ಣೆಯಾ- ಈಗಿನ ಸೊಸೆಯರಿಗೆ ಕನ್‌ಫ್ಯೂಸ್‌. `ವಾಟ್ಸ್‌ ದಿ ಆಯಿಲ್‌ ಯಾರ್‌’. ಎಣ್ಣೆ ಎರೆದು ತಲೆ ಮೀಸಲು ಮೊಮ್ಮಗ ಕುಳಿತುಕೊಳ್ಳುತ್ತಿಲ್ಲ, ಮಗನಿಗೆ ಪ್ರಾಜೆಕ್ಟ್‌ ಕೆಲಸ ಇನ್ನೂ ಮುಗಿದಿಲ್ಲ. ಸೊಸೆಗೆ ಇಂಪಾರ್ಟೆಂಟ್‌ ಮೀಟಿಂಗ್‌ ಇದೆ.

ಸಂಪೂರ್ಣ ಓದಿಗೆ ಭೇಟಿ ಕೊಡಿ- ಕಳ್ಳ-ಕುಳ್ಳ 

 
+++
ಊರಿಲ್ಲದವರಾಗುತ್ತಿದ್ದೇವೆ…!
ಕತ್ತಲೆ ದೀಪದ ಕುಡಿಯನ್ನು ಕಂಡು ಹೇಳಿತಂತೆ. “ನೋಡು, ನನ್ನ ಆಕಾರದ ಎದುರು ನಿನ್ನದೇನೂ ಇಲ್ಲ. ನಾನು ಮನಸ್ಸು ಮಾಡಿದರೆ ನಿನ್ನನ್ನು ನುಂಗಿ ಬಿಡುವೆ’. ಅದಕ್ಕೆ ದೀಪ ತಾಳ್ಮೆ ಕಳೆದುಕೊಳ್ಳಲಿಲ್ಲ. “ಇರಬಹುದು. ಆದರೆ ನೀನು ನುಂಗುವವರೆಗೂ ನಾನು ಬೆಳಗುತ್ತೇನೆ, ಸಾಕಲ್ಲ’ ಎಂದಿತಂತೆ. ಆ ಆತ್ಮವಿಶ್ವಾಸದ ಬೆಳಕು ನಮ್ಮೊಳಗೆ ಹೊತ್ತಿಕೊಂಡರೆ ಮತ್ತಷ್ಟು ದಿನ ನಮ್ಮೂರುಗಳನ್ನು ಉಳಿಸಿಕೊಳ್ಳಬಹುದೇನೋ…? ಬನ್ನಿ, ಹೋಗುವಾ ನಮ್ಮೂರಿಗೆ…ಮರಳಿ ನಮ್ಮಯ ಗೂಡಿಗೆ..

ಸಂಪೂರ್ಣ ಓದಿಗೆ ಭೇಟಿ ಕೊಡಿ- ಚೆಂಡೆಮದ್ದಳೆ 

‍ಲೇಖಕರು avadhi

26 October, 2008

0 Comments

Pin It on Pinterest

Share This

Discover more from ಅವಧಿ । AVADHI

Subscribe now to keep reading and get access to the full archive.

Continue reading