
ಘನತೆವೆತ್ತ ಪಕ್ಷದ ಘನತೆವೆತ್ತ ಮುಖಂಡರೊಬ್ಬರು ನಿಧಿ ಸಂಗ್ರಹದ ಡಬ್ಬಿ ಹಿಡಿದು ಅಂಗಡಿ ಅಂಗಡಿ ಬಾಗಿಲಿಗೆ ಹೋಗುವುದೂ, ಅವರು ಹೋದಕೂಡಲೇ ಅಂಗಡಿ ಮಾಲಿಕ ಹತ್ತೋ, ಐವತ್ತೋ, ನೂರೋ ರೂಪಾಯಿ ಹಾಕುವುದೂ ನಡೆದೇ ಇತ್ತು. ಟೀವೀ ಚಾನಲಿನ ಕ್ಯಾಮರಾಗಳೂ ಹಿಂಬಾಲಿಸಿದ್ದವು.
ಒಂದೆಡೆ ಕ್ಯಾಮರಾಗಳು ಮುಂದೆ ಹೋದವು, ಶ್ರೀಯುತರೂ ಕ್ಯಾಮರಾಗೆ ಪೋಸುಕೊಡುತ್ತ ಶಾಪ್ ಓನರ್ ಎದುರು ಡಬ್ಬಿ ಹಿಡಿದರು, ಅವರು ಅದೆಷ್ಟೋ ದುಡ್ಡು ತುರುಕಿ ತಾವೂ ಕ್ಯಾಮರಾಗೆ ಹಲ್ಕಿರಿದರು. ಮುಖಂಡ ಮಹಾಶಯರು, “ದೇಣಿಗೆ ನೀಡಿದ್ದಕ್ಕೆ ಸಂತೋಷ, ಥ್ಯಾಂಕ್ಸು” ಅಂದಾಗ ಆ ಪುಣ್ಯಾತ್ಮ – ಅಯ್ಯ ನಿಮ್ದೇ ದುಡ್ಡು ನಿಮ್ದೇ ಡಬ್ಬಿ ಅದಿಕ್ಕೆಲ್ಲ ಯಾಕೆ ಥ್ಯಾಂಕ್ಸು ಬಿಡೀ ಸಾರ್” ಅಂದು ಬಿಟ್ಟರು! ಪಾಪ, ಲೀಡರ್ರು ತಬ್ಬಿಬ್ಬು! ಅದ್ನೆಲ್ಲ ಏನ್ ಹೇಳ್ತೀರಿ ಮರ್ಯಾದಿ ಕಳೀಬೇಡಿ ಅಂತ ಬಡಬಡನೆ ಮುಂದೋಡಿತು ಸವಾರಿ..
ಪೂರ್ಣ ಓದಿಗೆ: ಮೀಡಿಯಾ ಮೈಂಡ್
Sugata recommends..






0 Comments