ಒಟ್ಟಿನಲ್ಲಿ ಇದು ಎಲ್ಲರಿಗೂ ಆತ್ಮಾವಲೋಕನದ ಕಾಲ. ಜನರಲ್ ಮುಷರಫ್ರ ಕೊನೆಗಾಲದ ಆತ್ಮಾವಲೋಕದ ಮಾತುಗಳೂ ನಮಗೆ ಪಾಠವಾಗಬಲ್ಲುವು – ಸಯೀದ್, ಲಖ್ವಿ ಇವರುಗಳು ಕಾಶ್ಮೀರದ ವಿಮೋಚನಾ ಹೋರಾಟಗಾರರಾಗಿದ್ದಾಗ ಅವರು ನಮ್ಮ ಹೀರೋಗಳಾಗಿದ್ದರು. ಯಾವಾಗ ಅವರ ಹೋರಾಟಕ್ಕೆ ಧಾಮರ್ಿಕ ಉಗ್ರವಾದ ಅಂಟಿತೊ ಆಗ ಅದು ಭಯೋತ್ಪಾದನೆಯಾಗಿ ಮಾರ್ಪಟ್ಟಿತು.
ಈಗ ಆ ಭಯೋತ್ಪಾದನೆ ತಮ್ಮ ಜನರನ್ನೇ ಅಂದರೆ ನಮ್ಮವರನ್ನೇ ಕೊಲ್ಲುವಲ್ಲಿಗೆ ಬಂದು ನಿಂತಿದೆ – ಇದನ್ನು ಚರಿತ್ರೆ ಕೂಗಿ ಕೂಗಿ ಹೇಳುತ್ತಾ ಬಂದಿದೆ. ಹಾಗೇ ‘ಧರ್ಮ ದೇವರ ಹೆಸರಲ್ಲಿ ಕೊಲೆ-ಸುಲಿಗೆ ದ್ವೇಷ ಮಾಡುವವರನ್ನು ದೇವರೂ ಕೂಡ ಕಾಪಾಡಲಾರ’ ಎಂಬ ಯೋಗಿಯ ಮಾತೂ ಇದೆ. – ಇದನ್ನು ಈ ಸಂದರ್ಭದಲ್ಲಿ ನೆನಪಿಸುವುದಕ್ಕಾಗಿ ಪ್ರಶಸ್ತಿಗಳನ್ನು ಹಿಂತಿರುಗಿಸುತ್ತಿದ್ದೇನೆ.
ದೇವನೂರ ಮಹಾದೇವ
0 ಪ್ರತಿಕ್ರಿಯೆಗಳು