ದೇವರಿಗೆ ಆತ ಮತ್ತೆ ಬರೆದ!

ಕ್ಷಮಿಸಿ ನಾವ್ ಹೇಳೋದೆಲ್ಲಾ ತಮಾಷೆಗಾಗಿ!

oh godಒಂದು ಸಲ ಒಬ್ಬ ಬಡವ ದೇವರಿಗೆ ಒಂದು ಕಾಗದ ಬರೆದನಂತೆ: “ದೇವರೇ, ನನಗೆ ನೂರು ರೂಪಾಯಿ ಬೇಕಾಗಿದೆ. ದಯವಿಟ್ಟು ಕಳಿಸು” ಅಂತ. ಕಾಗದದ ಮೇಲೆ, “ಸ್ವರ್ಗದಲ್ಲಿರುವ ದೇವರಿಗೆ” ಅಂತ ವಿಳಾಸ ಬರೆದು ಅಂಚೆಪೆಟ್ಟಿಗೆಯಲ್ಲಿ ಹಾಕಿದನಂತೆ.

ಪೋಸ್ಟಾಫೀಸಿನವರು ಆ ಕಾಗದವನ್ನು ನೋಡಿ ನಕ್ಕು “ನಮ್ಮ ರಾಜ್ಯದಲ್ಲಿ ಎಂಥೆಂಥವರಿದ್ದಾರೆ ಎಂಬುದನ್ನು ನಮ್ಮ ದೊರೆಗಳು ತಿಳಿಯಲಿ. ಅದೂ ಅಲ್ಲದೆ, ರಾಜಾ ಪ್ರತ್ಯಕ್ಷ ದೇವತಾ ಎಂದು ಹಿರಿಯರು ಹೇಳುತ್ತಾರಲ್ಲವೆ!” ಎಂದು ಅದನ್ನು ಆ ಊರಿನ ರಾಜನಿಗೆ ರವಾನಿಸಿದರು.

ರಾಜನೂ ಮಂತ್ರಿಯೂ ಪರಿವಾರದವರೂ ಆ ಬಡವನ ಕಾಗದವನ್ನು ಓದಿ ಓದಿ ನಕ್ಕು ನಕ್ಕು ಸುಸ್ತಾದರು. ಸುಧಾರಿಸಿಕೊಂಡ ಮೇಲೆ ದೊರೆ ಹೇಳಿದ: “ಮಂತ್ರಿ, ಆ ಬಡವನಿಗೆ ನೂರು ರೂಪಾಯಿ ಕಳಿಸಿಬಿಡು.”

ಮಂತ್ರಿ ಹೇಳಿದ: “ಪ್ರಭುವೇ, ಅವನೇ ನೂರು ಕೇಳಿರುವಾಗ ನಾವು ಪೂರ್ತಿ ನೂರನ್ನು ಕಳಿಸುವುದು ನೀತಿಯಲ್ಲ. ಹೀಗೆ ಕೇಳಿದವರಿಗೆಲ್ಲ ಅವರು ಕೇಳಿದಷ್ಟನ್ನು ಕಳಿಸಿದರೆ ಬೊಕ್ಕಸ ಬಹುಬೇಗ ಬರಿದಾಗುತ್ತದೆ. ಆದ್ದರಿಂದ ಅವನಿಗೆ ಐವತ್ತು ಕಳಿಸೋಣ, ಸಾಕು.”

“ಹಾಗೆಯೇ ಮಾಡು” ಎಂದ ರಾಜ. ಮಂತ್ರಿ ಆ ಬಡವನಿಗೆ ಅರಸನ ಹೆಸರಿನಲ್ಲಿ ಐವತ್ತು ರೂಪಾಯಿ ಕಳಿಸಿದ. ಬಡವ ಅದನ್ನು ಮಾತಿಲ್ಲದೆ ತೆಗೆದುಕೊಂಡ. ದೇವರಿಗೆ ಅದೇ ರಾತ್ರಿ ಮತ್ತೊಂದು ಕಾಗದ ಬರೆದ: “ದೇವರೇ, ನನ್ನ ಕಾಗದಕ್ಕೆ ನೀನು ಕೂಡಲೇ ಉತ್ತರ ಕೊಟ್ಟದ್ದು ತುಂಬ ಸಂತೋಷ. ಆದರೆ ದೇವರೇ, ಇನ್ನು ಮುಂದೆ ನೀನು ಹೀಗೆ ಏನಾದರೂ ಹಣ ಕಳಿಸುವುದಾದರೆ, ನೇರವಾಗಿ ನನಗೇ ಕಳಿಸು. ಈ ದೊರೆಯ ಮೂಲಕ ಕಳಿಸಬೇಡ. ಅವನು ನನಗೆ ಐವತ್ತು ಮಾತ್ರ ಕೊಟ್ಟಿದ್ದಾನೆ.”

 

‍ಲೇಖಕರು admin

October 30, 2015

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

ಪೂಜೆ!!

ಪೂಜೆ!!

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: