ನಗರ ನಕ್ಸಲ್ ಕವಿತೆಗಳು: ಒದೆ ತಿನ್ನುವವನ ಅಫಿಡವಿಟ್

ಪ್ರಶಸ್ತಿಗೆ, ಸಲಹಾಮಂಡಳಿ ಸದಸ್ಯತ್ವಕ್ಕೆ,

ಜಿ ಕೆಟಗರಿ ನಿವೇಶನಕ್ಕೆ, ಫ್ಲೆಕ್ಸಿಗೆ ಲಾಯಕ್ಕಾದ

ನೂರಾರು ಸ್ಥಾನಗಳಿಗೆ ಅರ್ಜಿ ಹಾಕಿಕೊಳ್ಳದೆ ಬದುಕಿದ

ಮೂರ್ಖತನಕ್ಕೆ ಪ್ರಾಯಶ್ಚಿತ್ತವಾಗಿ

 

ನೀಡಲೇಬೇಕಾಗಿದೆ ವಿವರಣೆಯ ಅಫಿಡವಿಟ್ಟು

ದಾಳಿಕೋರರ ನಿಂದನೆಗಳಲ್ಲಿ ಸತ್ಯಾಂಶ ಇದ್ದೀತೆಂದು

ಯುವ ಗೆಳೆಯರು ನಂಬುವ ಸಾಧ್ಯತೆ ಇರುವುದರಿಂದ

ಎಂದು ಅಲವತ್ತುಕೊಳ್ಳುವ ಬುದ್ಧಿಗೇಡಿ

ಒಂದು ದಿನ ಹಠಾತ್ತನೆ ನಡುಹಗಲು

ನಾಗರಿಕರು ಉಂಡು ಆಲಸಿಗಳಾದ ಹೊತ್ತಲ್ಲಿ

ವೈಜ್ಞಾನಿಕ ಮನೋಧರ್ಮದವನೆಂದು

ಪ್ರಶ್ನೆಗಳನ್ನು ಕೇಳುತ್ತಾನೆಂದು ಆರೋಪಿಸಿ

ಬಂಧಿಸಿದರು ನಗರ ನಕ್ಸಲ್ ಪಟ್ಟ ಕಟ್ಟಿ

ದುರಂತದ ತಳ ಮುಟ್ಟಿ

 

ನಿನ್ನ ತಾತ ನೀರು ಎಂಜಲು ಮಾಡಿದ ತಪ್ಪಿಗೆ

ನಿನಗೆ ಶಿಕ್ಷೆ ಎಂದು ಕುರಿಮರಿಯ ಮೇಲೆ

ಎಗರಿಬಿದ್ದ ತೋಳಗಳು ಸಾಬೀತುಮಾಡಿದವು

ಅಲ್ಪನಿಗೆ ಅಧಿಕ ಸಂದೇಹ ಚಾಳಿ

ಸುಟ್ಟರೂ ಹೋಗದ ಹೀನ ಸುಳಿ

ಸಿಕ್ಕಸಿಕ್ಕವರನ್ನು ಆರೋಪಿಸಿ ನಗರ ನಕ್ಸಲ್ ಎಂದು

ಬಂಧಿಸಿದರೂ ಅಲ್ಪಮತಿಗಳು ಇಳಿಯಲೇ ಬೇಕು ಕುರ್ಚಿ ಬಿಟ್ಟು

ಇದು ಸಾತ್ವಿಕ ಆಕ್ರೋಶದ ಅಫಿಡವಿಟ್ಟು.

‍ಲೇಖಕರು avadhi

September 17, 2018

ಹದಿನಾಲ್ಕರ ಸಂಭ್ರಮದಲ್ಲಿ ‘ಅವಧಿ’

ಅವಧಿಗೆ ಇಮೇಲ್ ಮೂಲಕ ಚಂದಾದಾರರಾಗಿ

ಅವಧಿ‌ಯ ಹೊಸ ಲೇಖನಗಳನ್ನು ಇಮೇಲ್ ಮೂಲಕ ಪಡೆಯಲು ಇದು ಸುಲಭ ಮಾರ್ಗ

ಈ ಪೋಸ್ಟರ್ ಮೇಲೆ ಕ್ಲಿಕ್ ಮಾಡಿ.. ‘ಬಹುರೂಪಿ’ ಶಾಪ್ ಗೆ ಬನ್ನಿ..

ನಿಮಗೆ ಇವೂ ಇಷ್ಟವಾಗಬಹುದು…

0 ಪ್ರತಿಕ್ರಿಯೆಗಳು

ಪ್ರತಿಕ್ರಿಯೆ ಒಂದನ್ನು ಸೇರಿಸಿ

Your email address will not be published. Required fields are marked *

ಅವಧಿ‌ ಮ್ಯಾಗ್‌ಗೆ ಡಿಜಿಟಲ್ ಚಂದಾದಾರರಾಗಿ‍

ನಮ್ಮ ಮೇಲಿಂಗ್‌ ಲಿಸ್ಟ್‌ಗೆ ಚಂದಾದಾರರಾಗುವುದರಿಂದ ಅವಧಿಯ ಹೊಸ ಲೇಖನಗಳನ್ನು ಇಮೇಲ್‌ನಲ್ಲಿ ಪಡೆಯಬಹುದು. 

 

ಧನ್ಯವಾದಗಳು, ನೀವೀಗ ಅವಧಿಯ ಚಂದಾದಾರರಾಗಿದ್ದೀರಿ!

Pin It on Pinterest

Share This
%d bloggers like this: