ಭಾರತೀಯ ಪ್ರಕಾಶಕರ ಒಕ್ಕೂಟವು ತನ್ನ ಸುವರ್ಣ ಮಹೋತ್ಸವದ ಅಂಗವಾಗಿ ನೀಡುತ್ತಿರುವ ಪ್ರತಿಷ್ಟಿತ ರಾಷ್ಟ್ರೀಯ ಪ್ರಶಸ್ತಿಗೆ ‘ನವಕರ್ನಾಟಕ ಪ್ರಕಾಶನ’ ಆಯ್ಕೆಯಾಗಿದೆ.
ಪ್ರಕಾಶನ ರಂಗದಲ್ಲಿ ಅನುರೂಪದ ಸೇವೆ ಸಲ್ಲಿಸಿದ್ದಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ತಿಂಗಳ 11 ಮತ್ತು 12 ರಂದು ಒಕ್ಕೂಟವು ನವದೆಹಲಿಯಲ್ಲಿ ಹಮ್ಮಿಕೊಂಡಿರುವ ಭಾರತೀಯ ಪ್ರಕಾಶಕರ ಸಮ್ಮೇಳನದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ರಮೇಶ್ ಮಿತ್ತಲ್ ತಿಳಿಸಿದ್ದಾರೆ .
‘ಪುಸ್ತಕಗಳ ಮೂಲಕ ಮಾನವ ಲೋಕದ ಸೇವೆ’ ಎನ್ನುವ ಧ್ಯೇಯದೊಂದಿಗೆ ಆರಂಭವಾದ ನವಕರ್ನಾಟಕ ಸಂಸ್ಥೆ ಇಂದು4 ಕೇಂದ್ರಗಳಲ್ಲಿ 6 ಮಾರಾಟ ಮಳಿಗೆಗಳನ್ನು ಹೊಂದಿದ್ದು 6500 ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದೆ.
ನವಕರ್ನಾಟಕ ಪ್ರಕಾಶನಕ್ಕೆ ಈವರೆಗೆ ನಾಡಿನ ಪುಸ್ತಕ ಪ್ರಾಧಿಕಾರ, ಅಂಕಿತ ಸೇರಿದಂತೆ ಹಲವು ಪ್ರತಿಷ್ಟಿತ ಪ್ರಶಸ್ತಿಗಳು ಸಂದಿವೆ.
0 ಪ್ರತಿಕ್ರಿಯೆಗಳು